ಸಿಡಿ ಲೇಡಿಯ ಮತ್ತೊಂದು ವೀಡಿಯೊ ರಿಲೀಸ್: ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ ಆಗ್ತಿದೆ ಎಂದ ಯುವತಿ

ಬೆಂಗಳೂರು, ಮಾ. 27: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಶನಿವಾರ ಬೆಳಿಗ್ಗೆ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ್ದು, ʻರಮೇಶ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಎನಿಸುವಷ್ಟು ಕಿರುಕುಳವಾಗುತ್ತಿದೆʼ ಎಂದು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 2ರಂದು ಸಿ.ಡಿ ಬಿಡುಗಡೆ ಆಯ್ತು. ಆ ಸಿ.ಡಿಯನ್ನು ಯಾರು ಬಿಡುಗಡೆ ಮಾಡಿದರೆಂದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ವಿಡಿಯೊ ಬರುತ್ತಿರುವುದನ್ನು ನೋಡಿ ಕರೆ ಮಾಡಿದರು. ನಾನು ನರೇಶ್ ಅಣ್ಣಗೆ ಕರೆ ಮಾಡಿ ಮಾತನಾಡಿದ್ದೆ. ಏನು ಮಾಡಲಿ ಅಣ್ಣಾ ಎಂದು ನರೇಶ್ ಜತೆ ಮಾತಾಡಿದ್ದೆ. ಈ ವಿಚಾರದಲ್ಲಿ ನಾನು ತುಂಬಾ ಚಿಕ್ಕವನು. ಇದಕ್ಕೆ ರಾಜಕೀಯ ಬೆಂಬ ಬೇಕೆಂದು ಹೇಳಿದ್ದರು.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅವರ ಜತೆ ಮಾತನಾಡೋಣ ಎಂದಿದ್ದರು. ಅವರ ಜತೆ ಮಾತನಾಡಿದರೆ ನ್ಯಾಯ ಸಿಗುತ್ತೆಂದು ನರೇಶ್ ಅಣ್ಣ ಹೇಳಿದ್ದರುʼ ಎಂದು ಯುವತಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ. ʻನಾನಿರುವ ಜಾಗಕ್ಕೆ ನರೇಶ್ ಅಣ್ಣ ಬಂದಿದ್ದರು. ಡಿ.ಕೆ. ಶಿವಕುಮಾರ್ ಮನೆಗೆ ಹೋಗೋಣ ಎಂದಿದ್ದರು. ಮನೆಯವರಿಂದ ಪದೇಪದೆ ಕರೆಗಳು ಬರುತ್ತಿದ್ದವು. ನಮ್ಮ ಮನೆಯವರು ಅಳುವುದು ಕೇಳಿ ಭಯವಾಯಿತು. ಅವರ ಜೀವಕ್ಕೆ ಏನಾದರು ಆಗುತ್ತೆಂಬ ಭಯ ನನಗಿತ್ತು. ಆಗ ನಮ್ಮ ಪೋಷಕರನ್ನು ನಾನೇ ಸಮಾಧಾನ ಮಾಡಿದ್ದೆ. ಡಿಕೆಶಿ ಮನೆಗೆ ಹೋಗುತ್ತಿದ್ದೇನೆಂದು ಅವರಿಗೆ ಹೇಳಿದ್ದೆ. ನಾವು ಡಿಕೆಶಿ ಮನೆಯ ಬಳಿ ಹೋಗಿದ್ದೆವು, ಆದರೆ ಅವರು ಸಿಕ್ಕಿರಲಿಲ್ಲ. ಭೇಟಿ ಮಾಡಲು ಹೋದಾಗ ಡಿ.ಕೆ.ಶಿವಕುಮಾರ್ ಸಿಗಲಿಲ್ಲ. ನಾನು ಈಗ ಸುರಕ್ಷಿತವಾಗಿದ್ದೇನೆʼ ಎಂದಿದ್ದಾರೆ ಯುವತಿ.

ʻನಾನು ಕಿಡ್ನ್ಯಾಪ್ ಆಗಿಲ್ಲ. ನಮ್ಮ ಪೋಷಕರು ಎಲ್ಲಿದ್ದಾರೆಂದು ನನಗೆ ಗೊತ್ತಿಲ್ಲ. ನಮ್ಮ ತಂದೆ, ತಾಯಿ, ಅಜ್ಜಿ, ಸಹೋದರರಿಗೆ ರಕ್ಷಣೆ ನೀಡಿʼ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

Exit mobile version