ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆ ಸೆರೆ

ಮೈಸೂರು, ಡಿ. 28: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ನರಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ದೇವಿ ಕೆರೆ ಬಳಿ ಘಟನೆ ನಡೆದಿದ್ದು ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆಯನ್ನು ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆನೆ ವೈದ್ಯ ಡಾ.ನಾಗರಾಜ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ಮದ್ದು ನೀಡಿ ಚಿರತೆ ಸೆರೆ ಹಿಡಿದಿದ್ದಾರೆ.

ರಾತ್ರಿ ಅಥವಾ ಮುಂಜಾನೆ ವೇಳೆ ಘಟನೆ ನಡೆದಿರಬಹುದು. ಚಿರತೆಯ ಮೇಲೆ ಯಾವುದೇ ಗಾಯಗಳು ಆಗಿಲ್ಲ. ವಾಹನಗಳ ಡಿಕ್ಕಿಯು ಆಗಿರಬಹುದು ಅಥವಾ ಪ್ರಾಣಿಗಳಿಗೆ ಕೆಲವೊಮ್ಮೆ ಪಾರ್ಶ್ವವಾಯು ಆಗಿರುವ ಸಾಧ್ಯತೆ ಗಳಿದೆ. ಎಕ್ಸ್ ರೇ ನಂತರವಷ್ಟೇ ಕಾರಣ ತಿಳಿಯಬಹುದು. ಮುಂದಿನ ಹಂತದಲ್ಲಿ ನಿಖರ ಕಾರಣ ಗೊತ್ತಾಗಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Exit mobile version