ಮೈಸೂರು, ಜ. 18: ರಾಜ್ಯ ರಾಜಕೀಯದಲ್ಲಿ ಏಪ್ರಿಲ್ ಬಳಿಕ ಮಹತ್ವದ ಬೆಳವಣಿಗೆ ಆಗಲಿದ್ದು, ಏಪ್ರಿಲ್ ಬಳಿಕ ಯಡಿಯೂರಪ್ಪ ನನ್ನ ತೆಗೆಯುತ್ತಾರೆ, ನನಗೆ ಆರ್ ಎಸ್ ಎಸ್ ಮೂಲಗಳಿಂದ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮುಂದುವರೆಯುತ್ತಾರೆ ಎಂಬ ಅಮಿತ್ ಶಾ ಹೇಳಿದ್ದಾರೆ. ಆದರೆ ಯಾವುದೇ ಪಕ್ಷದ ಹೈಕಮಾಂಡ್ ಅವರು ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಈ ರೀತಿ ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಹೇಳಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ? ಅವರು ಆ ರೀತಿ ಹೇಳಬಹುದು ಆದರೆ ನನಗಿರುವ ಮಾಹಿತಿ ಬೇರೆ.
ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ ಎಂದು ಹೇಳಿದರು.
ಇದೇ ವೇಳೆ ಶಾಸಕ ಶರತ್ ಬಚ್ಚೆಗೌಡ ಕಾಂಗ್ರೆಸ್ ನಾಯಕರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗ್ರಾ.ಪಂ ಚುನಾವಣೆಯಲ್ಲಿ ನಮ್ಮ ಪಕ್ಷ ಮತ್ತು ಶರತ್ ಸೇರಿ ಚುನಾವಣೆ ನಡೆಸಿದ್ದರು. ಹೊಸಕೋಟೆ ಕ್ಷೇತ್ರದಲ್ಲಿ ಶೇ.೭೦ ರಷ್ಟು ಬೆಂಬಲಿತರು ಗೆದ್ದಿದ್ದಾರೆ.
ಈ ಹಿನ್ನಲೆ ನನಗೆ ಧನ್ಯವಾದ ಹೇಳೋಕೆ ಬಂದಿದ್ದರು.
ಶರತ್ ಬಚ್ಚೆಗೌಡ ಪಕ್ಷಕ್ಕೆ ಬರುವ ಬಗ್ಗೆ ಮಾತುಕತೆ ನಡಯುತ್ತಿದೆ. ಇನ್ನೂ 15 ದಿನದಲ್ಲಿ ತೀರ್ಮಾನವಾಗುತ್ತೆ ಎಂದರು.
ಮುಂದುವರಿದು, ಸಿಎಂ ವಿರುದ್ಧ ಸಿಡಿ ಬ್ಲಾಮೇಲ್ ವಿಚಾರದ ಕುರಿತು ಮಾತನಾಡಿದ ಅವರು,
ಯಡಿಯೂರಪ್ಪ ಈ ವಯಸ್ಸಲ್ಲಿ ಏನೇನ್ ಮಾಡಿದ್ದಾನೋ ಯಾರಿಗ್ ಗೊತ್ತು.? ಅದು ಅಸಯ್ಯವಾಗಿ ಬೇರೆ ಇದೆಯಂತಲ್ಲಪ್ಪ..! ಅದು ಗೊತ್ತಾಗ್ಬೇಕಲ್ವೆ. ಈ ಬಗ್ಗೆ ತನಿಖೆಯಾಗಬೇಕು.
ಸಿಡಿಯಲ್ಲಿ ಏನೇನ್ ಮಾಡಿದಾರೋ ಅನ್ನೊದು ಬಹಿರಂಗವಾಗಲಿ. ಎಲ್ಲವೂ ಗೊತ್ತಾಗಬೇಕು ಅಂದ್ರೆ ತನಿಖೆಯಾಗಬೇಕು ಎಂದರು.