ಹಾಸನ: ರಾಜ್ಯದಲ್ಲಿ ಮತಾಂತರದಿಂದ ಕೋಮುಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಮತಾಂತರಕ್ಕೆ ಶಾಸಕ ಗೂಳಿಹಟ್ಟಿ ಶೇಖರ್ ಅವರ ಕುಟುಂಬವೇ ಒಳಗಾಗಿರುವುದು ನಿಜಕ್ಕೂ ವಿಪರ್ಯಾಸ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರುವುದಾಗಿ ಹೇಳಿದರು.
ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ, ಹಿಂದೂ ಧರ್ಮ ಜಗತ್ತಿನಲಿಯೇ ಪಾವಿತ್ರ್ಯತೆ ಹೊಂದಿರುವಂತದ್ದು, ಮತಾಂತರದಿಂದ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರಲಾಗುತ್ತದೆ ಎಂದು ಭರವಸೆ ನೀಡಿದರು. ಮತಾಂತರದ ಮೂಲಕ ತಮ್ಮ ಜನರ ಸಂಖ್ಯೆ ಹೆಚ್ಚಿಸಲು ನೋಡುವುದು ಅಧರ್ಮ. ಹಿಂದೂ ಧರ್ಮ ಜಗತ್ತಿನಲ್ಲೇ ಅತ್ಯಂತ ಪಾವಿತ್ರ್ಯತೆ ಹೊಂದಿದ್ದು, ಮತಾಂತರದಿಂದ ಕೋಮು ಗಲಭೆ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಆರ್ಎಸ್ಎಸ್ನ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದು, ಅವರಿಗೆ ತಾಲೀಬಾನ್ ಮತ್ತು ಆರ್ಎಸ್ಎಸ್ ನಡುವಿನ ವ್ಯತ್ಯಾಸ ಗೊತ್ತಿಲ್ಲ. ರಾಜಕೀಯ ಮಾಡಲು ಆರ್ಎಸ್ಎಸ್ನ ಹೆಸರನ್ನು ಎಳೆದು ತರುತ್ತಿದ್ದಾರೆ. ಅವರಿಗೆ ಯಾವುದೇ ಬೇರೆ ಅಸ್ತ್ರವಿಲ್ಲದೆ ಹೀಗೆ ಮಾತನಾಡುತ್ತಿದ್ದಾರೆ ದೇಶ ಮತ್ತು ವ್ಯಕ್ತಿ ಎಂದು ಬಂದಾಗ ಮೊದಲು ದೇಶದ ಪರ ನಿಲ್ಲಬೇಕು ಎಂದು ಆರ್ಎಸ್ಎಸ್ ಹೇಳುತ್ತದೆ. ಈ ರೀತಿ ಹೇಳುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಆರ್ಎಸ್ಎಸ್ ಮಾತ್ರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.