ರೌಡಿ ಶೀಟರ್‌ ಪಟ್ಟಿ ಪುನರ್‌ ಪರಿಶೀಲಿಸಿ – ಆರಗ ಜ್ಞಾನೇಂದ್ರ

ಬೆಂಗಳೂರು ಸೆ 7 : ಯಾವುದೇ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗದವರ ಮೇಲೆ ಅಮಾಯಕರ ಮೇಲೆ ರೌಡಿ ಶೀಟರ್‌ ಪಟ್ಟಿಯನ್ನು ತೆರೆಯಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿನ ರೌಡಿ ಶೀಟರ್‌ ಪಟ್ಟಿಯನ್ನು ಪುನರ್ ಪರಿಶೀಲಿಸುವಂತೆ ಗೃಹ ಸಚಿವ ಆರಗ ಜ್ಙಾನೇಂದ್ರ ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಸಣ್ಣ ಪುಟ್ಟ ಘಟನೆಗಳಲ್ಲಿ ಭಾಗಿಯಾದ ವ್ಯಕ್ತಿಗಳನ್ನೂ ರೌಡಿ ಪಟ್ಟಿಗೆ ಸೇರಿಸಲಾಗಿದೆ. ಅಣ್ಣ-ತಮ್ಮಂದಿರ ಆಸ್ತಿ ಗಲಾಟೆಯಲ್ಲಿ ಭಾಗವಹಿಸಿದವರ ಮೇಲೂ ರೌಡಿ ಪಟ್ಟಿ ತೆಗೆದಿರುವ ಉದಾಹರಣೆ ಇದೆ. ಇದಲ್ಲದೆ ಜನಪರ ಚಳುವಳಿಗಳಲ್ಲಿ ಭಾಗವಹಿಸಿದವರ ಮೇಲೂ ರೌಡಿ ಶೀಟರ್‌ ಪಟ್ಟಿಯನ್ನು ತೆಗೆಯಲಾಗಿದೆ. ಹೀಗಾಗಿ ಇಂತವರ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥರಲ್ಲದವರ ಹೆಸರನ್ನು ರೌಡಿ ಪಟ್ಟಿಯಿಂದ ತಗೆಯಲು ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದರು.

ರೌಡಿ ಶೀಟರ್ ಪಟ್ಟಿಯಿಂದ ಅಮಾಯಕರ ಹೆಸರನ್ನು ಹೊರತೆಗೆಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದರು.

Exit mobile version