• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೆಡಿಯಾಗುತ್ತಿದ್ದಾರೆ ‘ಏರಿಯಾ ಹುಡುಗರು’

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ರೆಡಿಯಾಗುತ್ತಿದ್ದಾರೆ ‘ಏರಿಯಾ ಹುಡುಗರು’
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 27: ಒಂದು ಏರಿಯಾಕ್ಕೆ ಸಂಬಂಧಿಸಿದ ಗೆಳೆಯರ ಕಥೆಗಳು ಕನ್ನಡ ಚಿತ್ರರಂಗಕ್ಕೆ ಹೊಸದೇನಲ್ಲ. ಈಗ ಅದೇ ಥರದ ಶೀರ್ಷಿಕೆ ಇದ್ದರೂ ಹೊಸ ಕಥೆ ಇಟ್ಟುಕೊಂಡು ಮತ್ತೊಂದು ಚಿತ್ರತಂಡ ಸಿನಿಮಾ ನಿರ್ಮಾಣಕ್ಕಿಳಿದಿದೆ. ಆ ಚಿತ್ರದ ಹೆಸರು ಏರಿಯಾ ಹುಡುಗರು.

ಒಂದೇ ಏರಿಯಾದಲ್ಲಿರುವ ನಾಲ್ಕು ಜನ ಸ್ನೇಹಿತರ ಜೀವನದಲ್ಲಿ ನಡೆಯುವ ಹಲವಾರು ರೋಚಕ ತಿರುವುಗಳನ್ನು ಈ ಚಿತ್ರದ ಮೂಲಕ ತೆರೆಮೇಲೆ ಹೇಳಹೊರಟಿದ್ದಾರೆ ಚಿತ್ರದ ನಿರ್ದೇಶಕ ಮೋಹನ್ ಅಪ್ಪು. ಈ ಹಿಂದೆ ನಾನೊಂಥರಾ ಚಿತ್ರದಲ್ಲಿ ಅಭಿನಯಿಸಿದ್ದ ಡಾ.ತಾರಖ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಮುಹೂರ್ತ ಸಮಾರಂಭ ಕಳೆದ ಸೋಮವಾರ ಗಾಂಧಿಬಜಾರ್‌ನ ನೆಟ್ಟಕಲ್ಲಪ್ಪ ಸರ್ಕಲ್‌ನಲ್ಲಿರವ ಶ್ರೀ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಪೊಗರು ಖ್ಯಾತಿಯ ಧೃವ ಸರ್ಜಾ ಅವರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಯುವ ಚಿತ್ರತಂಡದ ಹೊಸ ಪ್ರಯತ್ನವನ್ನು ಮೆಚ್ಚಿಕೊಂಡು ಒಳ್ಳೇದಾಗಲಿ ಎಂದು ಶುಭ ಹಾರೈಸಿದರು.

ಮೋಹನ್ ಅಪ್ಪು ಅವರ ಪ್ರಥಮ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ನಾಗೇಶ್ ಉಚ್ಚಂಗಿ ಅವರು ಛಾಯಾಗ್ರಹಣ ಮಾಡುವುದರ ಜೊತೆಗೆ ನಿರ್ದೇಶನದಲ್ಲೂ ಸಹ ಸಾಥ್ ನೀಡಿಸಿದ್ದಾರೆ. ಸುಮಂತ್ ಲವ್‌ಗುರು ಹಾಗೂ ನಾಗರಾಜ್‌ಗುಪ್ತ ಅವರು ಈ ಚಿತ್ರದ ನಿರ್ಮಾಪಕರು. ಕಲ್ಕಿ ಅಭಿಷೇಕ್ ಅವರ ಸಂಗೀತ ಸಂಯೋಜನೆ ಈ ಚಿತ್ರದ 4 ಹಾಡುಗಳಿಗೆ ನಾಗೇಶ್ ಉಚ್ಚಂಗಿ ಕ್ಯಾಮೆರಾ ವರ್ಕ್ ಇದೆ. ಸಂಭಾಷಣೆ ಹಾಗೂ ಸಾಹಿತ್ಯವನ್ನು ನಿರ್ದೇಶಕರೇ ರಚಿಸಿದ್ದಾರೆ. ಒಂದು ಏರಿಯಾದಲ್ಲಿರುವ 4 ಜನ ಸ್ನೇಹಿತರು ತಮ್ಮ ಜೀವನದಲ್ಲಿ ಯಾವುದೇ ಜವಾಬ್ದಾರಿ ಇಲ್ಲದೆ ತಾವು ನಡೆದದ್ದೇ ದಾರಿ ಎನ್ನುವ ಮನಸ್ಥಿತಿಯಲ್ಲಿ ತಮಗೆ ತೋಚಿದಂತೆ ಇರುತ್ತಾರೆ. ಆದರೆ ಅವರಲ್ಲಿ ಒಬ್ಬ ಮಾತ್ರ ಬುದ್ದಿವಂತನಾಗಿದ್ದು, ತನ್ನ ಸ್ನೇಹಿತರನ್ನು ಸರಿ ದಾರಿಗೆ ತರಲು ಆತ ಸಾಕಷ್ಟು ಸಲ ಪ್ರಯತ್ನವನ್ನು ಮಾಡುತ್ತಾನೆ. ಆದರೆ ಆಗಿರುವುದಿಲ್ಲ, ಯಾವುದೋ ಒಂದು ಪರಿಸ್ಥಿತಿಗೆ ಸಿಕ್ಕಿಕೊಂಡಾಗ ಅವರಿಗೆಲ್ಲ ಬುದ್ದಿ ಬರುತ್ತದೆ. ಅವರೆಲ್ಲರೂ ಆ ಒಂದು ಸಂದರ್ಭವನ್ನು ಹೇಗೆ ಎದುರಿಸುತ್ತಾರೆ, ನಿಜಕ್ಕೂ ಅವರಿಗೆ ಜವಾಬ್ದಾರಿ ಬಂತಾ ಮೊದಲಾದ ಪ್ರಶ್ನೆಗಳಿಗೆ ಏರಿಯಾ ಹುಡುಗರು ಚಿತ್ರ ಉತ್ತರ ಕೊಡುತ್ತದೆ. ಜೊತೆಗೆ ಒಂದು ಸಾಮಾಜಿಕ ಸಂದೇಶವನ್ನು ಕೂಡ ತಮ್ಮ ಚಿತ್ರದ ಮೂಲಕ ನಿರ್ದೇಶಕರು ಹೇಳಹೊರಟಿದ್ದಾರೆ. ಆ ನಾಲ್ವರಲ್ಲಿ ಬುದ್ಧಿವಂತ ಹುಡುಗನಾಗಿ ತಾರಕ್ ಕಾಣಿಸಿಕೊಂಡಿದ್ದಾರೆ. ಈವರೆಗೂ ನೋಡಿರದ ಕಥೆ, ನಿರೂಪಣೆ ಚಿತ್ರದಲ್ಲಿರುತ್ತದೆ ನೋಡುಗರಿಗೆ ಪ್ರತಿ ಸೀನ್ ಕುತೂಹಲ ಕೆರಳಿಸುತ್ತಾ ಸಾಗುತ್ತೆ ಎಂದವರು ಹೇಳಿದ್ದಾರೆ. ಉಳಿದಂತೆ ಸಾಕಷ್ಟು ಯುವಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ಏಪ್ರಿಲ್ 5ರಿಂದ ಆರಂಭಿಸಿ ಬೆಂಗಳೂರು, ಮೈಸೂರು, ಮಡಿಕೇರಿ, ಚಿಕ್ಕಮಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಿಸುವ ಯೋಜನೆ ಚಿತ್ರತಂಡಕ್ಕಿದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.