• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟ್ರ್ಯಾನ್ಸ್ ಫರ್ ಮಾಡಿದ್ದನ್ನು ಪ್ರಶ್ನಿಸಿ ಏಕಾಂಗಿ ಪ್ರತಿಭಟನೆ ನಡೆಸಿದ ಡಿ’ಗ್ರೂಪ್ ಮಹಿಳಾ ಸಿಬ್ಬಂದಿ ಬಂಧನ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಟ್ರ್ಯಾನ್ಸ್ ಫರ್ ಮಾಡಿದ್ದನ್ನು ಪ್ರಶ್ನಿಸಿ ಏಕಾಂಗಿ ಪ್ರತಿಭಟನೆ ನಡೆಸಿದ ಡಿ’ಗ್ರೂಪ್ ಮಹಿಳಾ ಸಿಬ್ಬಂದಿ ಬಂಧನ
0
SHARES
0
VIEWS
Share on FacebookShare on Twitter

ಮೈಸೂರು, ಫೆ. 01: ಅನಾರೋಗ್ಯದಿಂದ ಬಳಲುತ್ತಿರುವ ನನ್ನನ್ನು ಕಚೇರಿಯಿಂದ ಕಚೇರಿಗೆ ನಿಯೋಜನೆ ಮಾಡುವ ಮೂಲಕ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಧರಣಿ ನಡೆಸುತ್ತಿದ್ದ ಡಿ’ಗ್ರೂಪ್ ನೌಕರ ಮಹಿಳೆಯನ್ನು ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ಧರಣಿ ನಡೆಸುತ್ತಿದ್ದ ಮಹಿಳೆಯನ್ನು ಸೌಜನ್ಯಕ್ಕೂ ಕರೆದು ವಾತನಾಡಿಸಿ ಸಮಸ್ಯೆ ಬಗೆಹರಿಸಲು ಮುಂದಾಗದ ಅಧಿಕಾರಿ ವರ್ಗ, ಆಕೆಯ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ ಪರಿಣಾಮ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಲಕ್ಷ್ಮೀಪುರಂ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಆಕೆಯ ಹೆಸರು ಮಧು. ಆಕೆಯ ಪತಿ ಸುರೇಶ್ ಎಂಬವರು ಕಂದಾಯ ಇಲಾಖೆ ನೌಕರರಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಅನುಕಂಪದ ಆಧಾರದ ಮೇಲೆ ಆಕೆಗೆ ಡಿ ಗ್ರೂಪ್ ನೌಕರಿ ನೀಡಲಾಗಿದೆ. ಮೊದಲಿಗೆ ಬೆಂಗಳೂರಿನ ಕೆ.ಆರ್.ಪುರಂನ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ನಂತರ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ.

ಆಕೆ ಕಳೆದ ಹಲವಾರು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದಾರೆ. ಮಹಿಳೆ ಎಂಬುದನ್ನು ಗಮನಿಸದೆ ಅಧಿಕಾರಿ ವರ್ಗವು ಆಕೆಯನ್ನು ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ, ನಂಜನಗೂಡು ತಾಲ್ಲೂಕು ಕಚೇರಿ, ಚಿಕ್ಕಯ್ಯನ ಛತ್ರ ನಾಡ ಕಚೇರಿ ಹಾಗೂ ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜನೆ ಮೇಲೆ ಕೆಲಸಕ್ಕೆ ನೇಮಿಸಿದ್ದಾರೆ. ಇದೀಗ ಮತ್ತೆ ನಂಜನಗೂಡು ತಾಲ್ಲೂಕು ಕಚೇರಿಗೆ ಆಕೆಯನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಅವರು, ನಾನೂ ಕೂಡ ಎಲ್ಲ ಡಿ ಗ್ರೂಪ್ ನೌಕರರಂತೆ ಕೆಲಸ ನಿರ್ವಹಿಸುತ್ತಿದ್ದೆ. ಪತಿಯನ್ನು ಕಳೆದುಕೊಂಡವಳು ಎಂಬ ಕಾರಣಕ್ಕಾಗಿ ಕೆಲವರು ನನಗೆ ಲೈಂಗಿಕವಾಗಿ ಕಿರುಕುಳ ನೀಡಲಾರಂಭಿಸಿದರು. ಇದನ್ನು ವಿರೋಧಿಸಿದ ಕಾರಣ ನನ್ನನ್ನು ಕಚೇರಿಯಿಂದ, ಕಚೇರಿಗೆ ಬದಲಾಯಿಸಲಾಗುತ್ತಿತ್ತು.

ಈ ಹಿಂದೆ ಇದ್ದ ಎಡಿಸಿ ಅವರು ನಿನ್ನನ್ನು ಸಿದ್ದಾರ್ಥನಗರದ ಬಳಿಯ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜಿಸಲಾಗುತ್ತಿದೆ. ನೀನು ಸಮೀಪದಲ್ಲಿಯೇ ಮನೆ ವಾಡಿಕೊ ಎಂದು ತಿಳಿಸಿದ್ದರು. ಅದರಂತೆ ನಾನು ವಿದ್ಯಾನಗರದಲ್ಲಿ ಮನೆ ವಾಡಿಕೊಂಡಿದ್ದೇನೆ. 12 ವರ್ಷದ ಹೆಣ್ಣು ಮಗಳು ಹಾಗೂ ತಾಯಿಯೊಂದಿಗೆ ವಾಸಿಸುತ್ತಿದ್ದೇನೆ. ಪ್ರತೀ ದಿನ ನಂಜನಗೂಡಿಗೆ ಹೋಗಿ ಬರುವುದು ಕಷ್ಟವಾಗುತ್ತಿದೆ.

ಈ ಸಂಬಂಧ ಅಧಿಕಾರಿಗಳ ಕಾಲು ಹಿಡಿದು ಬೇಡಿಕೊಂಡರೂ ಯಾರೂ ಕೂಡ ಕರುಣೆ ತೋರುತ್ತಿಲ್ಲ. ಹೀಗಾಗಿ ಅನ್ಯ ದಾರಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಳಿತಿದ್ದೇನೆ. ನನಗೆ ನ್ಯಾಯಸಿಗುವವರೆಗೂ ನಾನು ಇಲ್ಲಿಂದ ಕದಲುವುದಿಲ್ಲ. ನನ್ನನ್ನು ತಾಲ್ಲೂಕು ಕಚೇರಿಗೆ ವರ್ಗಾವಣೆ ವಾಡಿಕೊಡಬೇಕು. ನಾನು ಎಲ್ಲರಂತೆ ಕೆಲಸ ಮಾಡದಿದ್ದಲ್ಲಿ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಹೇಳಿದರು.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.