ಒಂದೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಇದರಿಂದಾಗಿ ಜನಸಾಮನ್ಯರು ಕಂಗಾಲಾಗಿದ್ದರೆ, ಇನ್ನೊಂದೆಡೆ ಬಿಜೆಪಿಯ ನಾಯಕರು ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡಿ ಅವರು ಮುಜುಗರಕ್ಕೆ ಒಳಗಾಗುವುದರ ಜೊತೆಗೆ ಅವರ ಪಕ್ಷದ ಘನತೆ ಕುಗ್ಗುವುದಕ್ಕೂ ಪರೋಕ್ಷವಾಗಿ ಕಾರಣರಾಗಿದ್ದಾರೆ.
ಗ್ಯಾಸ್ ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ರೇಸ್ನಲ್ಲಿದ್ದ ಅರವಿಂದ್ ಬೆಲ್ಲದ್ ಮಾತನಾಡಿ ಎಲ್.ಪಿ.ಜಿ. ಸಿಲಿಂಡರ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಸಮಸ್ಯೆ ಕಾರಣ. ತಾಲಿಬಾನ್ ಸಮಸ್ಯೆಯಿಂದಾಗಿ ಕಚ್ಚಾ ತೈಲ ಬರುತ್ತಿಲ್ಲ. ಹಾಗಾಗಿ ಇಂಧನ ದರ ದೇಶದಲ್ಲಿ ಹೆಚ್ಚುತ್ತಿದೆ. ತಾಲಿಬಾನ್ ಉಗ್ರರಿಂದ ಇಡೀ ಪ್ರಪಂಚಕ್ಕೆ ತೊಂದರೆಯಾಗುತ್ತಿದೆ. ಇದರ ಪರಿಣಾಮ ಭಾರತದಲ್ಲೂ ಗ್ಯಾಸ್ ಸಿಲಿಂಡರ್ ದರ, ತೈಲ ದರ ಏರಿಕೆಯಾಗುತ್ತಿದೆ ಎಂದು ಸಮರ್ಥನೆ ನೀಡಿದರು. ಮತ್ತು ಗ್ಯಾಸ್ ದರ ಹೆಚ್ಚಳ ಯಾಕೆ ಆಗಿದೆ ಎಂದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ ಎಂದು ಅಸಂಬದ್ದ ಹೇಳಿಕೆ ನೀಡಿದ್ದಾರೆ.
ಇವರದ್ದು ಒಂದು ರೀತಿಯ ಅಸಂಬದ್ಧ ಹೇಳಿಕೆಯಾದರೆ ಸಚಿವ ನಾರಯಣಗೌಡ ಮಾತನಾಡಿ
ಬಿಜೆಪಿ ಪಕ್ಷ ದೇಶದ ಮಹಿಳೆಯರಿಗೆ ತೊಂದರೆ ಆಗಬಾರದೆಂದು ಮನೆ ಮನೆಗೆ ಉಚಿತ ಗ್ಯಾಸ್ ಸೌಲಭ್ಯ ಕೊಟ್ಟಿದೆ. ಇಂಧನ ಬೆಲೆಯಲ್ಲಿ ಏರಿಳಿತ ಇರುತ್ತದೆ. ಬೆಲೆ ಏರಿಕೆ ಸಮಸ್ಯೆ ಬಗೆಹರಿಸಲು ಪ್ರಧಾನಿ ಚಿಂತನೆ ನಡೆಸುತ್ತಿದ್ದಾರೆ. ಇಂಧನ ಬೆಲೆ ಹೆಚ್ಚಳದ ಬಗ್ಗೆ ಕಾಂಗ್ರೆಸ್ನವರು ಪ್ರತಿಭಟನೆ ಮಾಡುತ್ತಿರುವುದು ರಾಜಕಾರಣ ಎಂದರು. ಜೊತೆಗೆ ನಿಜವಾದ ಇಂಧನ, ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ, ಬೀದಿಗೆ ಬಂದಿರುವವರು ರಾಜಕಾರಣಿಗಳು ಮಾತ್ರ. ಹೀಗೆ ಕೇಂದ್ರದ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಕ್ರೀಡಾ ಸಚಿವ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.
ರಾಜಕಾರಣಿಗಳೇ ನಿವು ಪ್ರಬುದ್ಧರಾಗುವುದು ಯಾವಾಗ? ಒಂದೆಡೆ ಜನಸಾಮಾನ್ಯರು ಕೊರೊನಾ, ಬೆಲೆ ಏರಿಕೆಗಳಿಂದ ಕಂಗೆಟ್ಟಿದ್ದರೆ ಇನ್ನೊಂದೆಡೆ ರಾಜಕಾರಣಿಗಳು ಬಾಯಿಗೆ ಬಂದ ಹಾಗೆ ಹೇಳಿಕೆಗಳನ್ನು ಕೊಟ್ಟು ನಗೆಪಾಟಲಿಗೀಡಾಗುವುದರ ಜೊತೆಗೆ, ಮತ ಹಾಕಿ ಗೆಲ್ಲಿಸಿರುವ ವ್ಯಕ್ತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಡೆದುಕೊಳ್ಳುತ್ತಿರುವು ಎಷ್ಟರ ಮಟ್ಟಿಗೆ ಸರಿ ?
ರಾಜಕಾರಣಿಗಳೇ ನೀವು ಬದಲಾಗುವುದು ಯಾವಾಗ ?