ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು

ನವದೆಹಲಿ, ಜು. 31: ಜುಲೈ 26ರಂದು ಅಸ್ಸಾಂ-ಮಿಜೋರಾಂ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ 6 ಜನರು ಮೃತಪಟ್ಟು, ಎರಡೂ ರಾಜ್ಯಗಳ 100ಕ್ಕೂ ಹೆಚ್ಚು ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಿಝೋರಾಂ ಪೊಲೀಸರು, ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಮತ್ತು ಅಸ್ಸಾಂನ ಐಜಿ, ಡಿಐಜಿ, ಡಿಸಿ ಸೇರಿ ಆರು ಅಧಿಕಾರಿಗಳ ವಿರುದ್ಧ ಎಫ್​ಐಆರ್) ದಾಖಲಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ, ಅಸ್ಸಾಂನ ಭೂಮಿ, ಪ್ರಾದೇಶಿಕತೆ ರಕ್ಷಣೆಗೆ ನಾನು ನನ್ನ ಜೀವವನ್ನೇ ತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಅಸ್ಸಾಂ ಪೊಲೀಸರು, ಮಿಜೋರಾಂನ ರಾಜ್ಯ ಸಭಾ ಸದಸ್ಯ ಸೇರಿ ಆರು ಮಂದಿ ಅಧಿಕಾರಿಗಳಿಗೆ ಸಮನ್ಸ್​ ನೀಡಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳೂ ನಡೆದಿವೆ. ಇನ್ನೊಂದೆಡೆ ಮಿಜೋರಾಂ ಮುಖ್ಯಮಂತ್ರಿ ಜೋರಾಮ್ತಂಗಾ ಶಾಂತಿ ಕಾಪಾಡುವಂತೆ ಕರೆ ನೀಡುತ್ತಿದ್ದಾರೆ. ಗಡಿ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎನ್ನುತ್ತಿದ್ದಾರೆ.

Exit mobile version