• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್​​​​ಗೆ ಪ್ರಧಾನಿ ಚಾಲನೆ

Preetham Kumar P by Preetham Kumar P
in ಗುಡ್ ನ್ಯೂಸ್
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್​​​​ಗೆ ಪ್ರಧಾನಿ ಚಾಲನೆ
0
SHARES
0
VIEWS
Share on FacebookShare on Twitter

ನವದೆಹಲಿ ಸೆ 27 : ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್​​​​ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಮಾರಂಭದಲ್ಲಿ ಆಯುಷ್ಮಾನ್ ಭಾರತ್​ ಯೋಜನೆಯ ಹೊಸ ಹಂತಕ್ಕೆ ಅವರು ಚಾಲನೆ ನೀಡಿದರು.

ಬಳಿಕ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 21 ನೇ ಶತಮಾನದಲ್ಲಿ ಭಾರತವು ಮುಂದುವರೆಯಲು ಇಂದು ಅತ್ಯಂತ ಮಹತ್ವದ ದಿನ. ಕಳೆದ 7 ವರ್ಷಗಳ ಹಿಂದೆ ಆರಂಭಿಸಿದ ಆರೋಗ್ಯ ಅಭಿಯಾನಕ್ಕೆ ಇಂದು ಹೊಸ ಟಚ್ ಸಿಕ್ಕಿದೆ. ಭಾರತ್ ಡಿಜಿಟಲ್ ಮಿಷನ್ ಇಂದಿನಿಂದ ಕಾರ್ಯಾರಂಭ ಆಗುತ್ತಿದೆ. ಇದು ಭಾರತೀಯರ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿಕಾರಿ ಶಕ್ತಿಯನ್ನು ತುಂಬಲಿದೆ ಎಂದು ಅಭಿಪ್ರಾಯಪಟ್ಟರು.

ಈ ಯೋಜನೆಯಡಿ ಪ್ರತಿಯೊಬ್ಬ ಭಾರತೀಯನಿಗೂ ಡಿಜಿಟಲ್ ಆರೋಗ್ಯ ಐಡಿ ನೀಡಲಾಗುವುದು ಎಂದು ಅವರು ಹೇಳಿದರು. ಪ್ರತಿಯೊಬ್ಬ ನಾಗರಿಕನ ಆರೋಗ್ಯ ದಾಖಲೆ ಡಿಜಿಟಲ್ ವ್ಯವಸ್ಥೆಯಡಿ ಸುರಕ್ಷಿತವಾಗಿರಲಿದೆ ಎಂದು ಅವರು ಭರವಸೆ ನೀಡಿದರು.

ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ ಆಗಲಿದೆ. ಬಡವರು ಚಿಕಿತ್ಸೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ. 3 ವರ್ಷಗಳ ಹಿಂದೆ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಮಾನ್ ಯೋಜನೆಯನ್ನ ಆರಂಭಿಸಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಶುರುವಾಗುತ್ತಿದ್ದು, ನನಗೆ ಸಂತೋಷವಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಆಯುಷ್ಮಾನ್ ಯೋಜನೆ ದೇಶದ ಸಾವಿರಾರು ಬಡ ಕುಟುಂಬಗಳ ಕೈಹಿಡಿದಿದೆ. ಇದೀಗ ಇಂತಹ ಕುಟುಂಬಗಳ ರಕ್ಷಣೆಗೆ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಆರಂಭವಾಗಿದೆ. ಇದರ ಅಡಿಯಲ್ಲಿ ಡಿಜಿಟಲ್ ಆರೋಗ್ಯ ಐಡಿಯನ್ನು ನೀಡಲಾಗುತ್ತದೆ. ಪ್ರತಿಯೊಬ್ಬ ನಾಗರಿಕನ ಆರೋಗ್ಯ ದಾಖಲೆಯನ್ನು ಡಿಜಿಟಲ್ ಮೂಲಕ ರಕ್ಷಿಸಲಾಗುತ್ತದೆ ಅಂತಾ ತಿಳಿಸಿದರು.

ಆರೋಗ್ಯ ಸೇತು ಆ್ಯಪ್ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾಕಷ್ಟು ಸಹಾಯ ಮಾಡಿದೆ. ಉಚಿತ ಲಸಿಕೆ ಅಭಿಯಾನದ ಅಡಿಯಲ್ಲಿ ಭಾರತವು ಇಂದು ಸುಮಾರು 90 ಕೋಟಿ ಡೋಸ್‌ ವ್ಯಾಕ್ಸಿನೇಷನ್ ಪೂರೈಸಿದೆ. ಇದರ ಹಿಂದೆ ಕೋ-ವಿನ್‌ ಆ್ಯಪ್​ನ ಪಾತ್ರ ಕೂಡ ದೊಡ್ಡದಿದೆ. ಕೊರೊನಾ ಅವಧಿಯಲ್ಲಿ ಟೆಲಿಮೆಡಿಸಿನ್‌ನ ವಿಸ್ತರಣೆಯೂ ಆಗಿದೆ. ಈ ಸೌಲಭ್ಯವು ರಿಮೋಟ್​ ಸ್ಥಳಗಳಲ್ಲಿ ವಾಸವಾಗಿರುವ ದೇಶವಾಸಿಗಳು ನಗರದ ದೊಡ್ಡ ಆಸ್ಪತ್ರೆಗಳ ವೈದ್ಯರೊಂದಿಗೆ ಮನೆಯಲ್ಲಿಯೇ ಕುಳಿತು ಸಂಪರ್ಕಿಸಲು ಸಹಾಯ ಆಗಿದೆ ಎಂದು ಅವರು ತಿಳಿಸಿದರು.

Tags: ="Ayushman Bharat Mission

Related News

ಕರ್ನಾಟಕದಲ್ಲಿ ಒಟ್ಟು 15,000 ಶಿಕ್ಷಕರ ಭರ್ತಿಗೆ ಸರ್ಕಾರ ನಿರ್ಧಾರ
ಗುಡ್ ನ್ಯೂಸ್

ಕರ್ನಾಟಕದಲ್ಲಿ ಒಟ್ಟು 15,000 ಶಿಕ್ಷಕರ ಭರ್ತಿಗೆ ಸರ್ಕಾರ ನಿರ್ಧಾರ

December 11, 2021
ಸಾರಿಗೆ ಇಲಾಖೆಯಲ್ಲಿ  ಖಾಲಿಯಿರುವ 1529 ಹುದ್ದೆ ಭರ್ತಿಗೆ ಕ್ರಮ – ಸಾರಿಗೆ ಸಚಿವ
ಗುಡ್ ನ್ಯೂಸ್

ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ 1529 ಹುದ್ದೆ ಭರ್ತಿಗೆ ಕ್ರಮ – ಸಾರಿಗೆ ಸಚಿವ

October 1, 2021
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ
ಗುಡ್ ನ್ಯೂಸ್

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

September 23, 2021
ವಾಟ್ಸಾಪ್ ಬಳಕೆದಾರರಿಗೆ ಗುಡ್‌ ನ್ಯೂಸ್‌
ಗುಡ್ ನ್ಯೂಸ್

ವಾಟ್ಸಾಪ್ ಬಳಕೆದಾರರಿಗೆ ಗುಡ್‌ ನ್ಯೂಸ್‌

September 20, 2021

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.