• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವರಸೆ ಬದಲಿಸಿದ ಬಾಬಾ ರಾಮದೇವ್: ವೈದ್ಯರು ದೇವದೂತರು, ಶೀಘ್ರವೇ ಲಸಿಕೆ ಪಡೆಯುವೆ ಎಂದ ಯೋಗಗುರು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ವರಸೆ ಬದಲಿಸಿದ ಬಾಬಾ ರಾಮದೇವ್: ವೈದ್ಯರು ದೇವದೂತರು, ಶೀಘ್ರವೇ ಲಸಿಕೆ ಪಡೆಯುವೆ ಎಂದ ಯೋಗಗುರು
0
SHARES
0
VIEWS
Share on FacebookShare on Twitter

ಉತ್ತರಾಖಂಡ, ಜೂ. 11: ಕೋವಿಡ್‌ ಲಸಿಕೆ ಹಾಗೂ ಅಲೋಪತಿ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಯೋಗ ಗುರು ಬಾಬಾ ರಾಮದೇವ್‌ ಇದೀಗ ವರಸೆ ಬದಲಿಸಿದ್ದು, ವೈದ್ಯರನ್ನು ದೇವದೂತರು ಎಂದು ಬಣ್ಣಿಸಿರುವ ಅವರು ಶೀಘ್ರವೇ ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ.

ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೋವಿಡ್ ಲಸಿಕೆ ಅಗತ್ಯ ನನಗಿಲ್ಲ ಎಂದು ರಾಮದೇವ್‌ ಅವರು ಕೋವಿಡ್-19 ಮೇಲೆ ಅಲೋಪಥಿ ಔಷಧಿಗಳ ಪರಿಣಾಮಕಾರಿತ್ವದ ಬಗ್ಗೆ ಇತ್ತೀಚೆಗೆ ಸಂಶಯ ವ್ಯಕ್ತಪಡಿಸಿದ್ದರು. ಇದು ವೈದ್ಯರಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಯಿತು. ರಾಮದೇವ್ ವಿರುದ್ಧ ಎಲ್ಲೆಡೆ ವೈದ್ಯರು ಪ್ರತಿಭಟನೆ ನಡೆಸಿದರು.

ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ನೀಡುವ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿರುವ ಬಾಬಾ ರಾಮದೇವ್, ಇದೊಂದು ‘ಐತಿಹಾಸಿಕ ನಡೆ‘ ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಎಲ್ಲರೂ ಲಸಿಕೆ ಪಡೆಯಬೇಕೆಂದು ಮನವಿ ಮಾಡಿದ್ದಾರೆ.

‘ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನೂ ಪಡೆಯಿರಿ. ಯೋಗ ಮತ್ತು ಆಯುರ್ವೇದದ ರಕ್ಷಣೆಗಳನ್ನೂ ಪಡೆದುಕೊಳ್ಳಿ. ಈ ಎರಡರಿಂದಲೂ ಬಲವಾದ ರಕ್ಷಣೆ ಸಿಗುತ್ತದೆ. ಆಗ ಕೋವಿಡ್‌ಗೆ ಯಾವೊಬ್ಬ ವ್ಯಕ್ತಿಯೂ ಪ್ರಾಣಬಿಡುವುದಿಲ್ಲ,‘ ಎಂದು ಹರಿದ್ವಾರದಲ್ಲಿ ಸುದ್ದಿಗಾರರಿಗೆ ಬಾಬಾ ತಿಳಿಸಿದ್ದಾರೆ. ಈ ವೇಳೆ ಅಲೋಪತಿಯನ್ನೂ ಹೊಗಳಿದರು.

ಭಾರತೀಯ ವೈದ್ಯಕೀಯ ಸಂಘ (ಐಎಂಎ)ದೊಂದಿಗಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿರುವ ಅವರು, ‘ನಾನು ಯಾವುದೇ ಸಂಘಟನೆಯೊಂದಿಗೆ ದ್ವೇಷ ಹೊಂದಿಲ್ಲ. ಔಷಧಿಗಳ ಹೆಸರಿನಲ್ಲಿ ಜನರ ಮೇಲೆ ನಡೆಯುವ ಶೋಷಣೆಗೆ ನನ್ನ ವಿರೋಧʼ ಎಂದರು.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.