• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರು ಇ-ಖಾತಾ ಅಕ್ರಮ: 1,332 ಅಕ್ರಮ ಆಸ್ತಿ ನೋಂದಣಿ, ಐವರು ಉಪನೋಂದಣಾಧಿಕಾರಿಗಳ ಅಮಾನತು

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರು ಇ-ಖಾತಾ ಅಕ್ರಮ: 1,332 ಅಕ್ರಮ ಆಸ್ತಿ ನೋಂದಣಿ, ಐವರು ಉಪನೋಂದಣಾಧಿಕಾರಿಗಳ ಅಮಾನತು
0
SHARES
14
VIEWS
Share on FacebookShare on Twitter
  • ಇ-ಖಾತಾ ವ್ಯವಸ್ಥೆಯಲ್ಲೇ ಭಾರೀ ವಂಚನೆ: 1,332 ಆಸ್ತಿ (bangalore e khata property scam) ಅಕ್ರಮ ನೋಂದಣಿ ಬಹಿರಂಗ
  • ಕಾವೇರಿ 2.0 ಪೋರ್ಟಲ್ ದುರುಪಯೋಗ, ಐವರು ಉಪನೋಂದಣಾಧಿಕಾರಿಗಳ ಅಮಾನತು
  • ULMS ದಾಖಲೆ ದುರುಪಯೋಗ, ಗ್ರಾಮ ಪಂಚಾಯತ್ ವ್ಯಾಪ್ತಿಯ ಕಚೇರಿಗಳಲ್ಲಿ ಅಕ್ರಮ ಪತ್ತೆ

Bengaluru: ರಾಜ್ಯ ಸರ್ಕಾರದ ಇ-ಖಾತಾ (E-Khatha) ವ್ಯವಸ್ಥೆಯಲ್ಲೇ (bangalore e khata property scam) ಭಾರೀ ಅಕ್ರಮ ಬೆಳಕಿಗೆ ಬಂದಿದೆ.

ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರರಹಿತವಾಗಿಸಲು ಜಾರಿಗೆ ತರಲಾದ ಇ-ಖಾತಾ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ಒಂದು ವರ್ಷದಲ್ಲಿ ಸುಮಾರು 1,332 ಆಸ್ತಿಗಳ ಅಕ್ರಮ ನೋಂದಣಿ ನಡೆದಿರುವುದು ಪತ್ತೆಯಾಗಿದೆ.

ಈ ಹಗರಣವು ಡಿಸೆಂಬರ್ 6, 2024 ರಿಂದ ಡಿಸೆಂಬರ್ 5, 2025 ರ ಅವಧಿಯಲ್ಲಿ ನಡೆದಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

bangalore e khata property scam

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಐವರು ಉಪನೋಂದಣಾಧಿಕಾರಿಗಳನ್ನು ಅಮಾನತುಗೊಳಿಸಿದೆ.

ಈ ಪ್ರಕರಣವು ಬೆಂಗಳೂರು ನಗರದಲ್ಲಿ ಆಸ್ತಿ ನೋಂದಣಿ ವ್ಯವಸ್ಥೆಯ (bangalore e khata property scam) ಮೇಲಿನ ನಂಬಿಕೆಗೆ ದೊಡ್ಡ ಆಘಾತವನ್ನುಂಟುಮಾಡಿದೆ.

ಅಕ್ರಮದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿತರಾಗಿರುವವರು ರವಿ ಸಂಕನಗೌಡ, ಎನ್. ಸತೀಶ್ ಕುಮಾರ್, ಶ್ರೀಧರ್ (ಪ್ರಥಮ ದರ್ಜೆ ಸಹಾಯಕ ಹಾಗೂ ಕಾರ್ಯನಿರ್ವಹಣಾ ಉಪನೋಂದಣಾಧಿಕಾರಿ), ಗಿರೀಶ್ ಚಂದ್ರ ಹಾಗೂ ಆರ್. ಪ್ರಭಾವತಿ. ಕಾವೇರಿ 2.0 ಪೋರ್ಟಲ್ ಅನ್ನು ದುರುಪಯೋಗಪಡಿಸಿಕೊಂಡು, ಕಡ್ಡಾಯವಾಗಿದ್ದ ಇ-ಖಾತಾ ಮಾಹಿತಿಯನ್ನು ಇ-ಸ್ವತ್ತು ಸಾಫ್ಟ್‌ವೇರ್‌ನಿಂದ ಆಮದು ಮಾಡದೆ ಮಾರಾಟ ಪತ್ರಗಳ ನೋಂದಣಿ ಮಾಡಿರುವುದು ಇವರ ಮೇಲಿನ ಪ್ರಮುಖ ಆರೋಪವಾಗಿದೆ.

ಮುದ್ರಾಂಕ ಮತ್ತು ನೋಂದಣಿ ಇಲಾಖೆಯು ಈ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿ, ಇಲಾಖಾ ತನಿಖೆಯ ಜೊತೆಗೆ ಆಡಳಿತಾತ್ಮಕ ಕ್ರಮ ಕೈಗೊಂಡಿದೆ.

ರಾಜ್ಯ ಸರ್ಕಾರ ಬಹು ನಿರೀಕ್ಷೆಗಳೊಂದಿಗೆ ಜಾರಿಗೆ ತಂದಿದ್ದ ಇ-ಖಾತಾ ವ್ಯವಸ್ಥೆಯನ್ನು ಸಂಪೂರ್ಣ ಸುರಕ್ಷಿತ ಡಿಜಿಟಲ್ (Digital) ವ್ಯವಸ್ಥೆ ಎಂದು ಬಿಂಬಿಸಲಾಗಿತ್ತು.

ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ, ನಕಲಿ ದಾಖಲೆಗಳಿಗೆ ಅವಕಾಶವಿಲ್ಲದಂತೆ ರೂಪಿಸಲಾದ ಈ ವ್ಯವಸ್ಥೆಯಲ್ಲೇ ಅಕ್ರಮ ನಡೆದಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

ಈ ಹಗರಣವು ‘ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್’ (CSG) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಸಲ್ಲಿಸಿದ ದೂರಿನ ಬಳಿಕ ಬೆಳಕಿಗೆ ಬಂದಿದೆ. ಸರ್ಕಾರದ ವಿವಿಧ ಇಲಾಖೆಗೆ ತಾಂತ್ರಿಕ ಪರಿಹಾರ ಒದಗಿಸುವ ಈ ಸಂಸ್ಥೆಯ ದೂರಿನ ಆಧಾರದ ಮೇಲೆ ತನಿಖೆಗೆ ಚಾಲನೆ ದೊರೆಯಿತು.

ಈ ಪ್ರಕರಣದ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಸೈಬರ್ ಕ್ರೈಂ ಪ್ರಕರಣ ದಾಖಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ – 2000 ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಧಿಕಾರಿಗಳ ಪ್ರಕಾರ, 2024 ರಿಂದ ಇ-ಖಾತಾ ಇಲ್ಲದೆ ಯಾವುದೇ ಆಸ್ತಿ ನೋಂದಣಿಗೆ ಅವಕಾಶವಿರಲಿಲ್ಲ.

ಆದರೆ, ಯುನಿಫೈಡ್ ಲ್ಯಾಂಡ್ ಮ್ಯಾನೇಜ್‌ಮೆಂಟ್ ಸಿಸ್ಟಂ (ULMS) ಮೂಲಕ ಲಭ್ಯವಿರುವ ಭೂ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಸಾಫ್ಟ್‌ವೇರ್ ಹ್ಯಾಕ್ ಮಾಡುವ ಮೂಲಕ ಕೆಲವು ಆಸ್ತಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಇ-ಖಾತಾ ಇದೆ ಎಂದು ಸುಳ್ಳು ಮಾಹಿತಿ ತೋರಿಸಲಾಗಿದೆ.

ಈ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ವ್ಯವಸ್ಥೆಯ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಆಸ್ತಿ ನೋಂದಣಿ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇ-ಖಾತಾ ಕಡ್ಡಾಯವಾದ ಬಳಿಕ ಪತ್ತೆಯಾಗಿರುವ ಎರಡನೇ ದೊಡ್ಡ ಅಕ್ರಮ ಇದಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯ ಆಸ್ತಿಗಳ ಮೇಲೆ ಅಧಿಕಾರ ಹೊಂದಿರುವ ಹಲವು ಉಪನೋಂದಣಾಧಿಕಾರಿ ಕಚೇರಿಗಳು ಈ ಪ್ರಕರಣದಲ್ಲಿ ತೊಂದರೆಗೆ ಸಿಲುಕಿವೆ.

ಬಾಣಸವಾಡಿ, ಉಲ್ಸೂರು ಮತ್ತು ವರ್ತೂರು ಸೇರಿದಂತೆ ಹಲವು ಕಚೇರಿಗಳಲ್ಲಿ ತಾಂತ್ರಿಕ ದೋಷಗಳು ಹಾಗೂ ಸಾಫ್ಟ್‌ವೇರ್ ಬೈಪಾಸ್ (Software Bypass) ನಡೆದಿರುವುದು ತಾಂತ್ರಿಕ ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಈ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಮತ್ತಷ್ಟು ಕಠಿಣಗೊಳಿಸುವ ಸಾಧ್ಯತೆ ಇದೆ.

ಇದನ್ನು ಓದಿ : https://vijayatimes.com/siddaramaiah-new-special-law/
Tags: bengaluruE-KhathaillegalprovertyRegistration

Related News

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026
ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು
ಪ್ರಮುಖ ಸುದ್ದಿ

ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು

January 21, 2026
ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ

January 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.