ಬೆಂಗಳೂರು ಆ 24 : ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯದಲ್ಲಿ ಪ್ರತಿ ನಿತ್ಯ 5 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದಅವರು ಪ್ರಸ್ತುತ ರಾಜ್ಯದಲ್ಲಿ 2.5 ರಿಂದ 4 ಲಕ್ಷ ಜನರಿಗೆ ನಿತ್ಯ ಕೊರೋನಾ ಲಸಿಕೆ ನೀಡಲಾಗುತ್ತಿದೆ. ರಾಜ್ಯಕ್ಕೆ ಹೆಚ್ಚುವರಿ ಲಸಿಕೆ ಒದಗಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಬ್ಬರು ಮಹಿಳೆಯರಿಗೆ ಕೊರೋನಾ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.