ಲಾರಿಗೆ ಬಸ್‌ ಡಿಕ್ಕಿ 9 ಮಂದಿ ಸಾವು

ಬರಾಬಂಕಿ ( ಉ.ಪ್ರ )ಅ 8 : ಮರಳು ತುಂಬಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಪ್ರಯಾಣಿಕರು ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರಾಬಂಕಿ ಜಿಲ್ಲೆಯ ಬಬೂರಿ ಗ್ರಾಮದ ಸಮೀಪ ಲಾರಿಗೆ ಬಸ್ ಡಿಕ್ಕಿ ಹೊಡೆದು ಒಂಬತ್ತು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ ಇತರ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿಯಿಂದ ಬಹರೀಚ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ 70 ಪ್ರಯಾಣಿಕರಿದ್ದರು. ರಸ್ತೆಯಲ್ಲಿ ನಿಂತಿದ್ದ ಹಸುವನ್ನು ರಕ್ಷಿಸಲು ಹೋದ ಚಾಲಕ ಮರುಳು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಕಾರಿ ಯಮುನಾ ಪ್ರಸಾದ್ ತಿಳಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಲಕ್ನೋ ಅಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತನಾಥ್ ಅವರು ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂ.ಗಳ ಪರಿಹಾರ ದನ ಘೋಷಿಸಿದ್ದಾರೆ. ಮಾತ್ರವಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Exit mobile version