ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

Hubballi: ಲೋಕಸಭಾ ಚುನಾವಣೆಯ ಹಿನ್ನಲೆ ಧಾರವಾಡ ಜಿಲ್ಲೆಯ ‌ಕುಂದಗೋಳದಲ್ಲಿ ಪ್ರಹ್ಲಾದ್‌ ಜೋಶಿ (Basanagouda Patil Against Rahulgandhi) ಪರ ಪ್ರಚಾರ ಸಭೆಯಲ್ಲಿ 

ರಾಹುಲ್ ಗಾಂಧಿಗೆಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿವಾದಾತ್ಮಕ ಹೇಳಿಕೆ

ನೀಡಿ ಎಲ್ಲರ ಕೆಂಗಣ್ಣಿಗೆ(Basanagouda Patil Against Rahulgandhi) ಗುರಿಯಾಗಿದ್ದಾರೆ.

ಇನ್ನು ಇದೇ ವೇಳೆ ರಾಹುಲ್ ಗಾಂಧಿ (Rahul Gandhi) ಗೆದ್ರೆ ಬಟಾಯಿಂದ ಬಂಗಾರ ಬರುತ್ತದೆ, ಇದನ್ನು ನಾನು ಹೇಳುತ್ತಿಲ್ಲ ಈ ಹಿಂದೆ ಭಾಷಣದಲ್ಲಿ ರಾಹುಲ್ ಗಾಂಧಿಯವರೇ ಹೇಳಿದ್ದಾರೆ .ಬಂಗಾರ ಬಂದ್ರೆ

ನಮ್ಮ ದೇಶ ಯಾಕೆ ಬಡತನ ಇರುತ್ತಿತ್ತು ರಾಹುಲ್ಲಾ ಎಂದು ವ್ಯಂಗ್ಯವಾಡಿದ್ದಾರೆ. ಅವನು ಎಂದು ಏಕವಚನದಲ್ಲೇ (Basanagouda Patil Against Rahulgandhi) ಕಿಡಿಕಾರಿದ ಯತ್ನಾಳ್​, ‘ಅವನು ಏನ

ಮಾತಾಡ್ತಾನೆ ಅವನಿಗೆ ಗೊತ್ತಿಲ್ಲ. ಮೊನ್ನೆ ರಾಣೆಬೆನ್ನೂರ ಕಡೆ ಬಂದಿದ್ದ, ಈ ವೇಳೆ ಹುಚ್ಚರಾದ ಡಿಕೆ ಶಿವಕುಮಾರ್, ದಿನೇಶ್​ ಗುಂಡೂರಾವ್ (Dinesh Gundurao) ಆತನಿಗೆ ಮೆಣಸಿನಕಾಯಿ ತೋರಿಸಿದ್ದಾರೆ.

ಆಗ ಗೊತ್ತು ಗುರಿಯಿಲ್ಲದವರಂತೆ ಎಲ್ಲರೂ ಯಾಕೆ ಕೆಂಪು ಮೆಣಸಿಕಾಯಿ ಬೆಳೆದಿದ್ದೀರಿ ? ಬೇರೆ ಏನಾದರೂ ಬೆಳೆಯಬಹುದಿತ್ತು? ಎಂದು ಕೇಳಿದ್ದಾನೆ. ಇಂತವನಿಗೆ ನೀವು ದೇಶ ಕೊಡ್ತೀರಾ ಎಂದು ಹಾಸ್ಯ ಮಾಡಿದ್ದಾರೆ.

ಮೋದಿ ಅವರು 220 ಕೋಟಿ ಜನರಿಗೆ ವ್ಯಾಕ್ಸಿನೇಷನ್‌ (Vaccination) ಕೊಟ್ಟಿದ್ದಾರೆ. ಈ ವೇಳೆ ಇದು ಮೋದಿ ವ್ಯಾಕ್ಸಿನ್, ಮಕ್ಕಳಾಗಲ್ಲ ಅಂದರು. ಆದರೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ (Siddaramaiah,

DK Shivakumar) ವ್ಯಾಕ್ಸಿನ್ ಹಾಕಿಕೊಂಡಿದ್ದಾರೆ. ಅವರಿಗೆ ಏನಾದರೂ ಆಗಿದೆಯಾ? , ಎಂತಹ ನೀಚ ಬುದ್ದಿ ನೋಡಿ ಇವರದ್ದು ಎಂದು ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿ: ನೇರವಾಗಿ ಚುನಾವಣೆ ಎದುರಿಸುತ್ತೇನೆ ಹೊರತು ಜೇಬಲ್ಲಿ ಪೆನ್ ಡ್ರೈವ್ ಇದೆ, ಸಿ.ಡಿ ಇದೆ ಎಂದು ಹೆದರಿಸುವುದಿಲ್ಲ: ಡಿಕೆ ಶಿವಕುಮಾರ್

Exit mobile version