ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ – ಬೊಮ್ಮಾಯಿ

ಬಳ್ಳಾರಿ ಅ 05 : ಮೇಕೆದಾಟು ಯೋಜನೆಗೆ ತಮಿಳುನಾಡು ಎಷ್ಟೇ ವಿರೋಧ ಮಾಡಿದರೂ ತಲೆಕೆಡಿಸಿಕೊಳ್ಳದೆ ಮೇಕೆದಾಟು ಯೋಜನೆಯನ್ನು ಮಾಡೇ ಮಾಡುತ್ತೇವೆ . ಈ ಕುರಿತ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸ್ಪಷ್ಟಪಡಿಸಿದರು.

ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಮೇಕೆದಾಟು ಕುರಿತಂತೆ  ತಮಿಳುನಾಡ ನಿಲುವು ಗೊತ್ತಿರುವ ವಿಚಾರ, ಈ ವಿಷಯದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮೇಕೆದಾಟು ಯೋಜನೆಗೆ ನೀರನ್ನು ಕೊಡುವಂತಹ ಅಥವಾ ಯೋಜನೆ ಮಾಡುವಂತಹದ್ದು ತಮಿಳುನಾಡಿನವರ ಕೈಯಲಿಲ್ಲ. ಅವರು ಏನೇ ಮಾತಾಡಿದರೂ, ಏನೇ ನಿರ್ಣಯ ಮಾಡಿದರೂ ಅದಕ್ಕೆ ಅರ್ಥ ಇಲ್ಲ. ಈ ಸತ್ಯ ಗೊತ್ತಿದ್ದೂ, ಅಲ್ಲಿನ ಜನರಿಗೆ ದಾರಿ ತಪ್ಪಿಸುವ ಕೆಲಸವನ್ನು ಅಲ್ಲಿನ ಮುಖಂಡರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು

ಯೋಜನೆ ಕಾರ್ಯಗತಗೊಳಿಸುವ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಯಾವುದೇ ಕಾರಣಕ್ಕೂ ನಮ್ಮ ಪ್ರಯತ್ನ ನಿಲ್ಲುವುದಿಲ್ಲ. ಕಾನೂನಾತ್ಮಕ ಹೋರಾಟದಲ್ಲೂ ಬದಲಾವಣೆ ಇಲ್ಲ ಮೇಕೆದಾಟು ಆಗಿಯೇ ಆಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದರು

Exit mobile version