ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಳಾಗಿ ಮಾಜಿ ಸಚಿವರಾದ ಡಿ.ಎನ್ ಜೀವರಾಜ್ ಹಾಗೂ ರೇಣುಕಾಚಾರ್ಯ ನೇಮಕ

ಬೆಂಗಳೂರು ಸೆ 30: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವರಾದ ಡಿ.ಎನ್ ಜೀವರಾಜ್ ಮರು ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯದ ಈ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದಲ್ಲಿಯೂ ಸಹ ಡಿಎನ್ ಜೀವರಾಜ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದರು. 

ಪ್ರಸ್ತುತ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿಯೂ ಸಹ ಡಿ.ಎನ್ ಜೀವರಾಜ್ ಅವರು ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು, ಶೃಂಗೇರಿ ಕ್ಷೇತ್ರದ ಮುಂದಿನ ರಾಜಕೀಯ ಚಟುವಟಿಕೆಗಳಲ್ಲಿ ಬಹಳಷ್ಟು ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ

ರೇಣುಕಾಚಾರ್ಯಗೂ ಮತ್ತೆ ಅವಕಾಶ :  ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ರೇಣುಕಾಚಾರ್ಯ ಮತ್ತು ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಬೊಮ್ಮಾಯಿ ಸಿಎಂ ಆಗಿ 60 ದಿನಗಳಾದ ಬಳಿಕ ಇವರಿಬ್ಬರು ಮತ್ತದೇ ಸ್ಥಾನ ಅಲಂಕರಿಸಿ, ಸಂಪುಟ ದರ್ಜೆ ಸಚಿವರ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ.

Exit mobile version