• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನವೆಂಬರ್‌ನಿಂದ ಪೂರ್ಣಾವಧಿ ತರಗತಿಗಳು ಪ್ರಾರಂಭ

Preetham Kumar P by Preetham Kumar P
in ಪ್ರಮುಖ ಸುದ್ದಿ
ನವೆಂಬರ್‌ನಿಂದ ಪೂರ್ಣಾವಧಿ ತರಗತಿಗಳು ಪ್ರಾರಂಭ
1
SHARES
2
VIEWS
Share on FacebookShare on Twitter

ಶಿವಮೊಗ್ಗ ಅ 26 :  ಈ ಬಾರಿ ಪಠ್ಯವನ್ನು ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಅವರು ಸೋಮವಾರ ನಗರದ ಮಲವಗೊಪ್ಪ ಸರ್ಕಾರಿ ಶಾಲೆಯಲ್ಲಿ 1-5ನೇ ತರಗತಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಪಠ್ಯವನ್ನು ಕಡಿತಗೊಳಿಸುವ ಯಾವುದೇ ಯೋಚನೆ ಇಲಾಖೆಗೆ ಇಲ್ಲ. ಮುಂದಿನ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಬದಲಾವಣೆ ಮಾಡಿಕೊಳ್ಳಲಾಗುವುದು ಎಂದರು.

ದಸರಾ ರಜೆ ಕಡಿತಗೊಳಿಸಿರುವುದರಿಂದ ಪಠ್ಯ ಪೂರ್ಣಗೊಳಿಸಲು ಬೇಕಾದ ಕ್ರಮವನ್ನು ಶಿಕ್ತಕರ ಸಹಕಾರದೊಂದಿಗೆ ಈಗಾಗಲೇ ಮಾಡಲಾಗಿದೆ. ಪ್ರಾಥಮಿಕ ಶಿಕ್ಷಕರ ಸಂಘದ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ 3 ಸುತ್ತಿನ ಮಾತುಕತೆ ನಡೆದಿದೆ. ಕೆಲವೊಂದು ವಿಚಾರಗಳಲ್ಲಿ ಸ್ವಲ್ಪಮಟ್ಟಿನ ಭಿನ್ನಾಭಿಪ್ರಾಯವಿದ್ದು, ಅದನ್ನು ಕೂಡ ಬಗೆಹರಿಸಲಾಗುವುದು ಎಂದರು.

ತಜ್ಞರ ಸಲಹೆ ಮೇರೆಗೆ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆ ಆರಂಭಿಸಲಾಗಿದೆ. 1 ರಿಂದ 5ನೇ ತರಗತಿ ಪ್ರಾರಂಭಕ್ಕೆ ಪೋಷಕರು ಕಾಯುತ್ತಿದ್ದರು, ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಶಾಲೆ ಆರಂಭಿಸಲು ನಿರ್ಧರಿಸಿ ಮೊದಲ ಹಂತದಲ್ಲಿ ಅರ್ಧ ದಿನ ಶಾಲೆ ಮುಂದಿನ ತಿಂಗಳಿಂದ ಪೂರ್ತಿ ದಿನ ಶಾಲೆ ನಡೆಸಲು ತೀರ್ಮಾನಿಸಲಾಯಿತು ಎಂದರು.

ಇಂದು ಶಾಲೆಯಲ್ಲಿ ನೋಡಿದರೆ ಪೋಷಕರೇ ಖುಷಿಯಿಂದ ಮಕ್ಕಳನ್ನು ತಂದು ಶಾಲೆಗೆ ಬಿಡುತ್ತಿದ್ದಾರೆ. ಅಯಾ ಶಾಲಾ ಬಡಾವಣೆ ಜನರು ಸಹ ಶಾಲೆ ಆರಂಭಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಅನೇಕ ಕಡೆ ಶಾಲೆ ಆರಂಭ ಹಬ್ಬದ ರೀತಿಯಲ್ಲಿ ನಡೆಯುತ್ತಿದ್ದು, ಇದು ಸಮಾಜ ಶಿಕ್ಷಣಕ್ಕೆ ನೀಡಿರುವ ಆದ್ಯತೆಯನ್ನು ತೋರಿಸುತ್ತದೆ ಎಂದರು.

ರಾಜ್ಯದಲ್ಲಿ 48 ಸಾವಿರ ಶಾಲೆಗಳಿವೆ, ಈ ಪೈಕಿ 28900 ಶಾಲೆಗಳು ವ್ಯವಸ್ಥಿತವಾಗಿವೆ. 7 ಸಾವಿರ ಶಾಲೆಗಳ ದುರಸ್ತಿಯಾಗಬೇಕು. ಇದರಿಂದ ಇಂತಹ ಶಾಲೆಗಳಲ್ಲಿ ಮಕ್ಕಳನ್ನು ಹೊಂದಾಣಿಕೆ ಮಾಡಿಕೊಂಡು 2 ಪಾಳಿಯಲ್ಲಿ ಶಾಲೆ ನಡೆಸಲು ತಿಳಿಸಲಾಗಿದೆ ಎಂದರು

ಇನ್ನೂ ಶಾಲೆಗಳ ಅಭಿವೃದ್ಧಿಗೆ ದತ್ತು ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ಆಪ್ ತರುತ್ತಿದ್ದು ನನ್ನ ಶಾಲೆ ನನ್ನ ಕೊಡುಗೆ ಹೆಸರಿನಲ್ಲಿ ಸಾರ್ವಜನಿಕರು, ದಾನಿಗಳು ಸರ್ಕಾರಿ ಶಾಲೆಗಳ ದತ್ತು ಪಡೆದು ಅವುಗಳ ಅಭಿವೃದ್ಧಿಗೆ ಕೊಡುಗೆ ನೀಡಬಹುದಾಗಿದೆ ಎಂದು ತಿಳಿಸಿದರು ಜೊತೆಗೆ ಮುಂದಿನ ವಾರದಿಂದ 1 ರಿಂದ 5ನೇ ತರಗತಿ ಪೂರ್ಣಪ್ರಮಾಣದಲ್ಲಿ ನಡೆಯಲಿದ್ದು, ಬಿಸಿಯೂಟ ಆರಂಭಿಸಲಾಗುವುದು ಎಂದು ಹೇಳಿದರು

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.