ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾಳೆ‌ ಆಸ್ಪತ್ರೆಯಿಂದ ಬಿಡುಗಡೆ

ಕೋಲ್ಕತ್ತ, ಜ. 05: ಲಘು ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ (ಬಿಸಿಸಿಐ) ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಗಂಗೂಲಿ ಆರೋಗ್ಯದ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ವುಡ್‌ಲ್ಯಾಂಡ್ ಆಸ್ಪತ್ರೆಯ ಎಂಡಿ ಮತ್ತು ಸಿಇಒ ಡಾ. ರೂಪಾಲಿ ಬಸು ಅವರು, ಬುಧವಾರ ಗಂಗೂಲಿಯವರು ಬಿಡುಗಡೆಯಾಗಲಿದ್ದು ಬಳಿಕ ಮನೆಯಲ್ಲಿಯೇ ವೈದರ ನಿಗಾದಲ್ಲಿ ಇರಲಿದ್ದಾರೆ. 2-3 ವಾರಗಳ ಬಳಿಕ ಮುಂದಿನ ಹಂತದ ವೈದ್ಯಕೀಯ ಚಿಕಿತ್ಸೆ ನಡೆಯಲಿದೆ. ಡಿಸ್ಚಾರ್ಜ್ ಆದ ಬಳಿಕ ಗಂಗೂಲಿ ಅವರಿಗೆ ಬಳಿಕ ಅವರು ಮನೆಯಲ್ಲಿಯೇ ವೈದ್ಯರ ತಂಡದ ನಿಗಾದಲ್ಲಿ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸೌರವ್ ಗಂಗೂಲಿ ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದ್ದು ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಂಡುಬಂದ ಹಿನ್ನೆಲೆ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟೆಂಟ್‌ ಅಳವಡಿಸಲಾಗಿತ್ತು. ಈಗ 2-3 ವಾರಗಳ ಬಳಿಕ ಮುಂದಿನ ಹಂತದ ವೈದ್ಯಕೀಯ ಚಿಕಿತ್ಸೆ ನಡೆಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

Exit mobile version