• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಳಗಾವಿ ನಮ್ಮದು, ಇದನ್ನು ಪ್ರಶ್ನಿಸುವ ಹಕ್ಕು ಮಹಾರಾಷ್ಟ್ರಕ್ಕಿಲ್ಲ : ಎಚ್‌ಡಿಕೆ ಕಿಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಎಂಥಾ ಶಕ್ತಿ ಎದುರಾದ್ರೂ ಗೆಲ್ಲುತ್ತಾರೆ: ದೀದಿಗೆ ನೈತಿಕ ಬೆಂಬಲ ನೀಡಿದ ಎಚ್‌ಡಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 15: ಬೆಳಗಾವಿ ನಮ್ಮದು, ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು, ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕು ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಅಲ್ಲದೇ, ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ ಎಂದಿದ್ದಾರೆ.

ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ.

ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ ಎಂದಿದ್ದಾರೆ.

ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು ಎಂದು ಹೇಳಿರುವ ಅವರು, ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ? ಎಂದು ಪ್ರಶ್ನಿಸಿದ್ದಾರೆ .

Related News

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.