• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸೋಲದೇವನಹಳ್ಳಿಯಲ್ಲಿ ಮಕ್ಕಳ ನಿಗೂಢ ನಾಪತ್ತೆ

Preetham Kumar P by Preetham Kumar P
in ರಾಜ್ಯ
ಸೋಲದೇವನಹಳ್ಳಿಯಲ್ಲಿ ಮಕ್ಕಳ ನಿಗೂಢ ನಾಪತ್ತೆ
0
SHARES
0
VIEWS
Share on FacebookShare on Twitter

ಬೆಂಗಳೂರು 11 : ಮುಂಜಾನೆ ವಾಕಿಂಗ್‌ಗೆ ತೆರಳಿದ್ದ ಏಳು ಮಕ್ಕಳು ನಾಪತ್ತೆಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಬಾಗಲಗುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯ ಬೆನ್ನಲ್ಲೇ ಮಕ್ಕಳು  ಪೋಷಕರು ಕಂಗಾಲಾಗಿದ್ದಾರೆ. ನಾಪತ್ತೆಯಾಗಿರುವ ಮಕ್ಕಳ ಮನೆಯಲ್ಲಿ ಒಂದೇ ರೀತಿಯ ಪತ್ರ ದೊರೆತಿದ್ದು, ಅನುಮಾನ ಹುಟ್ಟುಹಾಕಿದೆ. 

 ಬೆಂಗಳೂರಿನ ಬಾಗಲಗುಂಟೆಯ ಶೇಷಾದ್ರಿ ಲೇಔಟ್‌ನ ನಿವಾಸಿಯಾಗಿರುವ ಕಿರಣ್‌ ಎನ್.‌ ( 15 ವರ್ಷ), ಪರೀಕ್ಷಿತ್‌ ವಿ. (15 ವರ್ಷ). ನಂದನ್‌ ಎಂ. (15 ವರ್ಷ) ನಾಪತ್ತೆಯಾಗಿದ್ದಾರೆ. ಇನ್ನೊಂದೆಡೆ ಸೋಲದೇವನಹಳ್ಳಿಯ  ಎಜಿಬಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ರಾಯನ್‌ ಸಿದ್ದಾರ್ಥ್‌ (12 ವರ್ಷ ) ಅಮೃತ ವರ್ಷೀಣಿ (21 ವರ್ಷ ), ಭೂಮಿ (12 ವರ್ಷ ) , ಚಿಂತನ್‌ (12 ವರ್ಷ) ನಾಪತ್ತೆಯಾಗಿದ್ದಾರೆ. 

ಮುಂಜಾನೆ 5 ಗಂಟೆಯ ಸುಮಾರಿಗೆ ಮನೆಯಲ್ಲಿ ವಾಕಿಂಗ್‌ಗೆ ಹೋಗುವುದಾಗಿ ಹೇಳಿ ಮಕ್ಕಳು ಮನೆಗೆ ವಾಪಾಸಾಗಿರಲಿಲ್ಲ. ಬೆಳಗ್ಗೆ 8 ಗಂಟೆಯ ವರೆಗೂ ಮಕ್ಕಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾದ  ಪೋಷಕರು ಮಕ್ಕಳನ್ನು ಹುಡುಕಾಡುವುದಕ್ಕೆ ಶುರುಮಾಡಿದ್ದಾರೆ. ಸ್ನೇಹಿತರ ಮನೆಗೆ ಕರೆ ಮಾಡಿದಾಗ ತಮ್ಮ ಮಕ್ಕಳೂ ಕೂಡ ನಾಪತ್ತೆಯಾಗಿರೋದು ತಿಳಿದು ಬಂದಿದೆ. ನಂತರ ಮನೆಯಲ್ಲಿ ಹುಡುಕಾಟ ನಡೆಸಿದಾಗ ಎಲ್ಲಾ ಮಕ್ಕಳು ನಾಪತ್ತೆಯಾಗುವುದಕ್ಕೆ ಮೊದಲು ಬರೆದಿಟ್ಟಿದ್ದ ಪತ್ರಗಳು ಪತ್ತೆಯಾಗಿತ್ತು. 

ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ನಂದನ್‌ ಎಂಬ ಬಾಲಕ ನನಗೆ ಕಬ್ಬಡ್ಡಿ ಆಟದಲ್ಲಿ ಹೆಚ್ಚಿನ ಆಸಕ್ತಿ ಇದ್ದು, ನಾನು ಏನಾದರೂ ಸಾಧನೆ ಮಾಡಿ, ಹಣಗಳಿಸಿ ಮನೆಗೆ ವಾಪಾಸು ಬರುತ್ತೇನೆ ಎಂದು ಪತ್ರ ಬರೆದಿದ್ದಾರೆ ಅಲ್ಲದೇ ಈತನ ಜೊತೆಗೆ ನಾಪತ್ತೆಯಾಗಿರುವ ಪರೀಕ್ಷಿತ್‌ ಕೂಡ ನನಗೆ ಓದಿನಲ್ಲಿ ಆಸಕ್ತಿಯಿಲ್ಲ, ನಾನು ಯಾವುದಾದರೂ ಕ್ರೀಡೆಯಲ್ಲಿ ಸಾಧನೆ ಮಾಡಿ ಬರುತ್ತೇನೆ. ಆದರ ನನ್ನನ್ನು ಹುಡುಕಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇನ್ನು ನಾಗರಾಜ್‌ ಎಂಬವರ ಪುತ್ರ ಕಿರಣ್‌ ಎಂಬಾತ ಕೂಡ ನಾಪತ್ತೆಯಾಗಿದ್ದು, ಕಿರಣ್‌ ಮನೆಯಿಂದ ಹೋಗುವ ವೇಳೆಯಲ್ಲಿ ತಂದೆಯ ಮೊಬೈಲ್‌ ತೆಗೆದುಕೊಂಡು ಹೋಗಿದ್ದಾನೆ. ಆದರೆ ಮೊಬೈಲ್‌ಗೆ ಕರೆ ಮಾಡಿದ್ರೆ ಸ್ವಿಚ್‌ ಆಫ್‌ ಬರುತ್ತಿದೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

 ಇನ್ನೊಂದೆಡೆಯಲ್ಲಿ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ನಾಲ್ಕು ಮಕ್ಕಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ರಾಯನ್‌ ಸಿದ್ದಾರ್ಥ್‌, ಅಮೃತ ವರ್ಷೀಣಿ, ಭೂಮಿ ಹಾಗೂ ಚಿಂತನ್‌ ನಾಪತ್ತೆಯಾಗಿರುವ ಕುರಿತು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪೈಕಿ ಅಮೃತ ವರ್ಷೀಣಿ ಹೊರತು ಪಡಿಸಿದ್ರೆ ಉಳಿದ ಎಲ್ಲರೂ ಕೂಡ 12 ರಿಂದ 15 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. 

ಎಲ್ಲಾ ಮಕ್ಕಳು ಮನೆಯಲ್ಲಿ ವಾಕಿಂಗ್‌ಗೆ ತೆರಳುವುದಾಗಿ ಹೋಗಿದ್ದರು. ಸೋಲದೇವನಹಳ್ಳಿಯಲ್ಲಿ ನಾಪತ್ತೆಯಾಗಿರುವ ಮಕ್ಕಳು ಮನೆಯಲ್ಲಿ ಒಂದೇ ರೀತಿಯ ಪತ್ರ ಸಿಕ್ಕಿದೆ. ಪತ್ರದಲ್ಲಿ ಸ್ಪೋರ್ಟ್‌ ಐಟಂ, ಚಪ್ಪಲಿ, ಬ್ರಶ್‌, ಪೇಸ್ಟ್‌, ವಾಟರ್‌ ಬಾಟಲಿ, ಹಣ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.