• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಂದ್ ಕಾವು: ರಾಪಿಡೊ ಚಾಲಕರ ಮೇಲೆ ಪ್ರತಿಭಟನಾಕಾರರಿಂದ ಹಲ್ಲೆ, ರಸ್ತೆಗಿಳಿದ ವಾಹನಗಳ ಟೈಯರ್ ಪಂಚರ್

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬಂದ್ ಕಾವು: ರಾಪಿಡೊ ಚಾಲಕರ ಮೇಲೆ ಪ್ರತಿಭಟನಾಕಾರರಿಂದ ಹಲ್ಲೆ, ರಸ್ತೆಗಿಳಿದ ವಾಹನಗಳ ಟೈಯರ್ ಪಂಚರ್
0
SHARES
406
VIEWS
Share on FacebookShare on Twitter

Bengaluru: ಬೆಂಗಳೂರಿನಲ್ಲಿ (Bengaluru) ಬಂದ್ ಬಿಸಿ ಹೆಚ್ಚಾಗುತ್ತಿದ್ದು, ಕೆಲ ಕಡೆ ರಾಪಿಡೊ, ಗೂಡ್ಸ್ (Bengaluru bandh live updates) ವಾಹನಗಳು ಎಂದಿನಂತೆ ಸೇವೆ ಆರಂಭಿಸಿದ್ದು,

ಹೀಗಾಗಿ ಪ್ರತಿಭಟನಾಕಾರರು ಟಯರ್​​ಗಳ ಗಾಳಿ ಬಿಟ್ಟು ವಾಹನ ಸವಾರರನ್ನು ಹಿಗ್ಗಾಮುಗ್ಗ ಥಳಿಸಿ ಆಕ್ರೋಶ ಹೊರ ಹಾಕಿದ ಘಟನೆ ನಗರದ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಮೇಲೆ

ರಾಪಿಡೊ (Rapido) ಚಾಲಕ ಮತ್ತು ಹಿಂಬದಿ ಸವಾರನ (Bengaluru bandh live updates) ಮೇಲೆ ಹಲ್ಲೆ ನಡೆದಿದೆ.

Bengaluru bandh live updates

ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗೆ ಆಗ್ರಹಿಸಿ ಇಂದು ಖಾಸಗಿ ಸಾರಿಗೆ ಒಕ್ಕೂಟ ಬೃಹತ್ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಖಾಸಗಿ ಬಸ್, ಓಲಾ ಆಟೋ (Ola Auto), ಕ್ಯಾಬ್, ಉಬರ್

ಆಟೋ ಕ್ಯಾಬ್, ಗೂಡ್ಸ್ ವಾಹನಗಳು ರಸ್ತೆಗೆ ಇಳಿದಿಲ್ಲ. ಆದರೆ ಬೆಂಗಳೂರಿನ ಕೆಲವೆಡೆ ರಾಪಿಡೊ, ಗೂಡ್ಸ್ ವಾಹನಗಳು ಎಂದಿನಂತೆ ಸೇವೆ ಆರಂಭಿಸಿರುವ ಕಾರಣ ಪ್ರತಿಭಟನಾಕಾರರು

ಟಯರ್​​ಗಳ ಗಾಳಿ ಬಿಟ್ಟು ವಾಹನ ಸವಾರರನ್ನು ಹಿಗ್ಗಾಮುಗ್ಗ ಥಳಿಸಿ ಆಕ್ರೋಶ ಹೊರ ಹಾಕಿರುವ ಘಟನೆ ಸಂಭವಿಸಿದೆ.

ನಗರದ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಮೇಲೆ ರಾಪಿಡೊ ಚಾಲಕ ಮತ್ತು ಹಿಂಬದಿ ಸವಾರನ ಮೇಲೆ ಹಲ್ಲೆ ನಡೆದಿದ್ದು, ಅವರುಗಳು ಹೆಲ್ಮೆಟ್ (Helmet) ಹಾಕಿದ್ದರೂ ತಲೆ ಮೇಲೆ ಹೊಡೆದು

ಹಲ್ಲೆ ಮಾಡಲಾಗಿದೆ. ಅಲ್ಲದೆ ಹತ್ತಕ್ಕೂ ಹೆಚ್ಚು ಕ್ಯಾಬ್ ಚಾಲಕರು ರಾಪಿಡೋ ಸವಾರನ ಬೈಕ್ ಬೀಳಿಸಿ ಚಾಲಕನನ್ನು ಅಟ್ಟಾಡಿಸಿ ಹೊಡೆದಿರುವುದಲ್ಲದೆ ರಾಪಿಡೊ ಚಾಲಕರು ಖಾಸಗಿ ಸಾರಿಗೆ

ಸಂಘಟನೆ ಒಕ್ಕೂಟದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಷ್ಟೇ ಅಲ್ಲದೆ ಬಾಡಿಗೆ ಹೋಗ್ತಿದ್ದ ಕಾರು ಚಾಲಕನ ಮೇಲೆ‌ ಗಾಂಧಿನಗರದ (Gandhi Nagar) ಮೌರ್ಯ ಸರ್ಕಲ್‌ ಬಳಿ ಹಲ್ಲೆ ನಡೆಸಿದ್ದು, ಕಾರಿನ ಕೀ ಕಿತ್ತುಕೊಂಡು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಕಾರು ಚಾಲಕನ ರಕ್ಷಣೆ ಮಾಡಿದ್ದು, ಇನ್ನು ಮತ್ತೊಂದೆಡೆ ರಾಪಿಡೊ ಬೈಕ್ ಸವಾರನ ಜೊತೆ ಗಲಾಟೆ ಮಾಡಿಕೊಂಡು ಹಲ್ಲೆಗೆ ಯತ್ನಿಸಿದ ಘಟನೆ

ನಡೆದಿರುವುದು ಬೆಳಕಿಗೆ ಬಂದಿದೆ.

ಖಾಸಗಿ ಸಾರಿಗೆ ಒಕ್ಕೂಟದವರೇ ರಾಪಿಡೊ ಬೈಕ್ ಬುಕ್ ಮಾಡಿ, ಬೈಕನ್ನ ಬೊಮ್ಮನಹಳ್ಳಿಯ (Bommanhalli) ಮುಖ್ಯ ರಸ್ತೆಗೆ ಕರಿಸಿಕೊಂಡು ಸ್ಥಳಕ್ಕೆ ಬೈಕ್ ಬಂದ ಮೇಲೆ ಚಾಲಕನ ಮೇಲೆ

ಹಲ್ಲೆ ನಡೆಸಿ ದರ್ಪ ಮೆರೆದಿದ್ದಾರೆ. ಮತ್ತು ಬೆಂಗಳೂರಿನ ಎಸ್​ಪಿ ರೋಡ್​ನ ಸುಜಾತಾ ಥಿಯೇಟರ್ ಬಳಿ ಐದಾರು ಗೂಡ್ಸ್ ಗಾಡಿಗಳ ಟೈರ್ ಗಾಳಿ ತೆಗೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

ಅಲ್ಲದೆ ಟೈರ್ ಗಾಳಿ ತೆಗೆದಿದ್ದರಿಂದ ಕೆಲವೊತ್ತು ವಾಹನಗಳು ನಿಂತಲ್ಲೇ ನಿಂತಿದ್ದವು. ಈ ವೇಳೆ ಸವಾರರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿತ್ತು. ಟ್ರಾಫಿಕ್ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು,

ಟ್ರಾಫಿಕ್ ಕ್ಲಿಯರ್ ಮಾಡಿದರು. ಇನ್ನು ಪೊಲೀಸರು ಬರುತ್ತಿದ್ದಂತೆ ವಾಹನಗಳ ಗಾಳಿ ತೆಗೆದವರು ಎಸ್ಕೇಪ್ ಆಗಿದ್ದರು ಈ ವೇಳೆ ಕೆಲ ಚಾಲಕರು ಗಾಳಿ ಹೋಗಿದ್ದ ಟೈರ್ ನಲ್ಲೇ ವಿಧಿ ಇಲ್ಲದೇ ಸಂಚಾರ

ಮಾಡುವ ಪರಿಸ್ಥಿತಿ ಎದುರಾಯಿತು.

ಇದನ್ನು ಓದಿ: ಸಿಸಿಬಿ ದಾಳಿ: ಅಪ್ರಾಪ್ತವರಿಗೆ ಮಧ್ಯ ಮಾರಾಟ ಹಿನ್ನೆಲೆ ಬೆಂಗಳೂರಿನ ಪಬ್, ಬಾರ್ ಗಳ ಮೇಲೆ ಸಿಸಿಬಿ ದಾಳಿ

  • ಭವ್ಯಶ್ರೀ ಆರ್.ಜೆ
Tags: AutobengalurucabrapidoUber

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.