• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮೊಟ್ಟೆ, ಚಿಕನ್ ರೋಲ್ ಕೊಡಲಿಲ್ಲ ಎಂದು ಹೋಟೆಲ್ ಸಿಬ್ಬಂದಿಯ ಕೊಠಡಿಗೆ ಬೆಂಕಿಯಿಟ್ಟ ಗ್ಯಾಂಗ್!

Mohan Shetty by Mohan Shetty
in ರಾಜ್ಯ
ಮೊಟ್ಟೆ, ಚಿಕನ್ ರೋಲ್ ಕೊಡಲಿಲ್ಲ ಎಂದು ಹೋಟೆಲ್    ಸಿಬ್ಬಂದಿಯ ಕೊಠಡಿಗೆ ಬೆಂಕಿಯಿಟ್ಟ ಗ್ಯಾಂಗ್!
0
SHARES
2
VIEWS
Share on FacebookShare on Twitter

Bengaluru : ಬೆಂಗಳೂರಿನ ಹನುಮಂತನಗರದ(Bengaluru Gang sets Ablaze) ಹೋಟೆಲ್ ನಲ್ಲಿ ತಮಗೆ ಮೊಟ್ಟೆ ಮತ್ತು ಚಿಕನ್ ರೋಲ್ ನೀಡಲಿಲ್ಲ ಎಂದು ಹೋಟೆಲ್ ಸಿಬ್ಬಂದಿ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೋಟೆಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಕೊಠಡಿಯ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪುಂಡರನ್ನು ಪೊಲೀಸರು ಸದ್ಯ ಬಂಧಿಸಿದ್ದಾರೆ!

Bengaluru Gang sets Ablaze

ಘಟನೆಯ ವಿವರ : ಭಾನುವಾರ ರಾತ್ರಿ ಬೆಂಗಳೂರಿನ (Bengaluru Gang sets Ablaze) ಹನುಮಂತನಗರದ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಮೂರು ಜನರ ಗ್ಯಾಂಗ್ ಹೋಟೆಲ್‌ಗೆ ಆಗಮಿಸಿ, ಚಿಕನ್ ರೋಲ್‌, ಮೊಟ್ಟೆಯನ್ನು ಆರ್ಡರ್ ಮಾಡಿದೆ.

ಆದ್ರೆ, ಇದನ್ನು ಪೂರೈಸಲು ಹೋಟೆಲ್(Hotel) ಸಿಬ್ಬಂದಿ ನಿರಾಕರಿಸಿದ್ದಾರೆ.

ಕಾರಣ, ಹೋಟೆಲ್ ಸಿಬ್ಬಂದಿ ವಸ್ತುಗಳನ್ನು ಸ್ವಚ್ಛಗೊಳಿಸಿ ಮನೆಗೆ ತೆರಳುವ ವೇಳೆಗೆ ಪುಂಡರು ಈ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ.

ಹೋಟೆಲ್ ಸಿಬ್ಬಂದಿ ಊಟ ಇಲ್ಲ, ಈಗ ಕೊಡಲು ಸಾಧ್ಯವಿಲ್ಲ ಎಂದು ಹೇಳಿದಕ್ಕೆ ಕೋಪಗೊಂಡ ಮೂವರು, ನಮಗೆ ಹಸಿವಾಗಿದೆ! ಊಟ ಬೇಕು, ಕೊಡಿ ಎಂದು ಸಿಬ್ಬಂದಿ ವಿರುದ್ಧ ಗಲಾಟೆ ಮಾಡಿದ್ದಾರೆ.

ಇದನ್ನೂ ಓದಿ : https://vijayatimes.com/top-10-football-players/

ಹೋಟೆಲ್ ಸಿಬ್ಬಂದಿ ಮತ್ತು ಮೂರು ಜನರ ನಡುವೆ ಪ್ರಾರಂಭವಾದ ವಾಗ್ವಾದ ತಾರಕಕ್ಕೇ ಏರಿದೆ. ಮಾತಿಗೆ ಮಾತು ಬೆಳೆದಂತೆ ಸ್ಥಳೀಯರು ಮಧ್ಯೆಪ್ರವೇಶಿಸಿ, ಹೋಟೆಲ್ ಸಿಬ್ಬಂದಿ ಮತ್ತು ಗ್ಯಾಂಗ್ ಅನ್ನು ಸಮಾಧಾನಪಡಿಸಿ ಕಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಗಲಾಟೆ ಬಗೆಹರಿದು ಎಲ್ಲಾ ಸರಿಹೋಯಿತು ಎಂದು ಎಲ್ಲರು ಹಿಂದಿರುಗಿದ ವೇಳೆ,

ಮೂವರು ಸ್ಥಳದಿಂದ ಹೋಗದೆ, ಹೋಟೆಲ್ ಸಿಬ್ಬಂದಿ ಮನೆಗೆ ಹೋಗುವಾಗ ಅವರನ್ನು ಹಿಂಬಾಲಿಸಿಕೊಂಡು ಹೋಗಿ, ಬೆಳಿಗ್ಗೆ 3:30ರ ಸುಮಾರಿಗೆ ಅವರ ಮನೆಯ ಬಾಗಿಲಿಗೆ, ಕಿಟಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಮನೆಗೆ ಬೆಂಕಿ ಹಚ್ಚಿದ ಕೂಡಲೇ ಮೂವರು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/drishyam-2-reaches-cr-club/

ಮಾಹಿತಿಯನ್ನು ಕಲೆಹಾಕಿದ ಪೊಲೀಸರು ಆರೋಪಿಗಳು ಕೊಪ್ಪಳ ಮತ್ತು ಗುಲ್ಬರ್ಗದ ಕಟ್ಟಡ ಕಾರ್ಮಿಕರು ಎಂದು ಹೇಳಿದ್ದಾರೆ. ನೆರೆಹೊರೆಯವರು ಬೆಂಕಿಯನ್ನು ಕಂಡು ನಂದಿಸಲು ಕೂಡಲೇ ಸ್ಥಳಕ್ಕೆ ಧಾವಿಸಿ, ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.

ಹೋಟೆಲ್ ಮಾಲೀಕ ನಿತೀಶ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ದೇವರಾಜ್ (23) ಮತ್ತು 15 ವರ್ಷದ ಇಬ್ಬರು ವ್ಯಕ್ತಿಗಳನ್ನು ಪತ್ತೆ ಹಚ್ಚಿದ್ದಾರೆ.

Bengaluru

ಪ್ರಕರಣದಲ್ಲಿ ಭಾಗಿಯಾಗಿರುವ ಮೂರನೇ ಆರೋಪಿ ಗಣೇಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 436 (ಬೆಂಕಿ ಅಥವಾ ಮನೆ ಧ್ವಂಸ ಮಾಡುವ ಉದ್ದೇಶದಿಂದ ಸ್ಫೋಟಕ ವಸ್ತುಗಳಿಂದ ಕಿಡಿಗೇಡಿತನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.