ಮಸೀದಿಯಲ್ಲಿನ ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ ಪೊಲೀಸರು

ಬೆಂಗಳೂರು ಡಿ 22 :  ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ನಗರದಲ್ಲಿನ ಮಸೀದಿಗಳಲ್ಲಿರುವ ಧ್ವನಿ ವರ್ಧಕಗಳನ್ನು ಪೊಲೀಸರು ತೆರವುಗೊಳಿಸುತ್ತಿದ್ದಾರೆ. ರಾಜ್ಯ ರಾಜಧಾನಿಯ ಮಸೀದಿಗಳಲ್ಲಿ ಇದ್ದ ಧ್ವನಿವರ್ಧಕಗಳನ್ನ ಪೊಲೀಸರು ಉಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತೆರೆವುಗೊಳಿಸಿದ್ದಾರೆ.ನಿನ್ನೆಯಷ್ಟೆ ಸಿದ್ದಾಪುರ ವಾರ್ಡ್ 144 ನಲ್ಲಿದ್ದ ಧ್ವನಿ ವರ್ಧಕಗಳನ್ನ ತೆರುವುಗೊಳಿಸಲಾಗಿದೆ.

ಈ ಸಂಬಂಧದ ರಿಟ್ ಪಿಟಿಷನ್ 4574/2021 ರಲ್ಲಿ ಈ ಬಗ್ಗೆ ವಿಚಾರಣೆ ಇನ್ನೂ ಬಾಕಿ ಇದೆ. ಆದರೆ ಅರ್ಜಿ ಇತ್ಯರ್ಥ ಆಗುವವರೆಗೂ ನ್ಯಾಯಾಲಯದ ಆದೇಶವನ್ನು ಪೊಲೀಸರು ಪರಿಗಣಿಸಬೇಕಾಗಿದೆ. ವಿಶೇಷ ದಿನಗಳ ಹೊರತು ಪಡಿಸಿ ಬೇರೆ ದಿನಗಳಲ್ಲಿ ಧ್ವನಿವರ್ಧಕಗಳನ್ನ ಬಳಸುವಂತಿಲ್ಲ. ಹೀಗಾಗಿ ಮಸೀದಿಗಳಲ್ಲಿದ್ದ ಧ್ವನಿವರ್ಧಕಗಳನ್ನ ತೆರವುಗೊಳಿಸುವಂತೆ ಪೊಲೀಸರು ನೊಟೀಸ್ ನೀಡಿದ್ದಾರೆ. ನಿರ್ಲಕ್ಷ್ಯ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

Exit mobile version