ಬೆಂಗಳೂರು ನ 26 : ಭಾರೀ ಶಬ್ದ ಕೇಳಿದ ಪರಿಣಾಮ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿರುವ ಘಟನೆ ಬೆಂಗಳೂರು ಹಾಗೂ ಮಂಡ್ಯದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 12:15ರ ಸುಮಾರಿಗೆ 10 ರಿಂದ 15 ನಿಮಿಷಗಳ ಅಂತರದಲ್ಲಿ 2 ಭಾರೀ ಬೆಂಗಳೂರಿನ ಆರ್.ಆರ್ ನಗರ, ನಾಗರಭಾವಿ, ಕೆಂಗೇರಿ, ಯಶವಂತಪುರ, ಕಗ್ಗಲಿಪುರ, ಹೆಮ್ಮಿಗೆಪುರ, ಜ್ಞಾನಭಾರತಿ, ಉಲ್ಲಾಳ ಸೇರಿದಂತೆ ಹಲವೆಡೆ ದೊಡ್ಡ ಶಬ್ಧ ಕೇಳಿ ಬಂದಿದೆ. ಇದರಿಂದಾಗಿ ಬೆಂಗಳೂರಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಈ ಬಗ್ಗೆ ಭೂ ಗರ್ಭ ತಜ್ಞ ಪ್ರಕಾಶ್ ಮಾತನಾಡಿ ಬಾಂಗ್ಲಾದೇಶದ ಚಿತ್ತಂಗಾಂಗ್ನಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಲ್ಲಿನ ತೀವ್ರತೆ ಇಲ್ಲಿ ಆಗಿದೆ. ಬೆಂಗಳೂರಿನಲ್ಲಿ ಕಂಪಿಸಿದರ ಬಗ್ಗೆ ರಿಕ್ಟರ್ ಮಾಪಕದಲ್ಲಿ ಕಂಪನ ದಾಖಲಾಗಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅವಶ್ಯಕತೆ ಅಗತ್ಯವಿಲ್ಲ ಎಂದು ತಿಳಿಸಿದರು.