Karwar: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು, ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಪರದಾಡುತ್ತಿದೆ.
ಮಂಗನ ಕಾಯಿಲೆ (Monkey disease)ಗೆ ಕಳೆದ ಐದು ವರ್ಷದಲ್ಲಿ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಜನ ಸೋಂಕಿತರಾಗಿದ್ದು 8 ಜನ ಈ ಕಾಯಿಲೆಯಿಂದ ಮೃತರಾಗಿದ್ದರು. ಇದೀಗ ಶಿವಮೊಗ್ಗ ಜಿಲ್ಲೆಯ ಗಡಿಯನ್ನು ಹೊಂದುಕೊಂಡಿರುವ ಸಿದ್ದಾಪುರದ (Siddapura) ಕೊರ್ಲಕೈ, ಬಿಳಗಿ ಗ್ರಾಮದ ಒಟ್ಟು ಐದು ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡರೇ ಹಲವು ಜನರಲ್ಲಿ ಈ ಸೊಂಕಿನ ಲಕ್ಷಣ ಕಂಡುಬಂದಿದೆ. ಇನ್ನು ಈ ಭಾಗದ ಜನರ ರಕ್ತ ಮಾದರಿ ಸಹ ಪಡೆಯಲಾಗುತ್ತಿದೆ.
ಈ ಭಾಗದಲ್ಲಿ ಎರಡು ಮಂಗಳು ಸಾವನ್ನಪ್ಪಿದೆ. ಹೀಗಾಗಿ ಈ ಭಾಗದ ಜನರಿಗೆ ಕಾಡಿಗೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ, ಕುಮಟಾ, ಭಟ್ಕಳ (Honnavara, Kumuta, Bhatkala), ಜೋಯಿಡಾ ಘಟ್ಟಭಾಗದಲ್ಲಿ ಮಂಗನಿಂದ ಹಬ್ಬುವ ಕೆ.ಎಫ್.ಡಿ ಕಾಯಿಲೆ ಇದೀಗ ಶಿವಮೊಗ್ಗ ನಂತರ ಉತ್ತರ ಕನ್ನಡ ಜಿಲ್ಲೆಯನ್ನು ಮತ್ತೆ ಕಾಡುತ್ತಿದೆ.
ಸಿದ್ದಾಪುರದಲ್ಲಿ ವರ್ಷದ ಮೊದಲೇ ಮಂಗನ ಕಾಯಿಲೆ ಖಾತೆ ತೆರದಿದ್ದು, ಈ ಕಾಯಿಲೆಗೆ ಈ ಹಿಂದೆ ನೀಡಲಾಗುತಿದ್ದ ಲಸಿಕೆ ಪರಿಣಾಮಕಾರಿ ಅಲ್ಲ ಹಾಗೂ ಗುಣಮಟ್ಟದ ಕಾರಣ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಹಿಂಪಡೆದಿದೆ. ಹೀಗಾಗಿ ಮಂಗನಕಾಯಿಲೆಗೆ ಲಸಿಕೆ ಸಹ ಇಲ್ಲ. ಜಿಲ್ಲಾ ಆರೋಗ್ಯ ಇಲಾಖೆ ಸೊಳ್ಳೆ, ಉಣಗು, ತಿಗಣೆಗಳು ಕಚ್ಚದಂತೆ ತಡೆಯುವ ಡಿ.ಎಮ್.ಪಿ ಆಯಲ್ (DMP Oil)ನನ್ನು ಮಾತ್ರ ಜನರಿಗೆ ನೀಡುತ್ತಿದ್ದು ಎರಡು ವರ್ಷದಿಂದ ಲಸಿಕೆ ಬಂದ್ ಮಾಡಿದೆ.
ಹಾಗಾಗಿ ಜನರಲ್ಲಿ ಸಹ ಲಸಿಕೆ ಇಲ್ಲದ ಕಾರಣ ಭಯ ಹುಟ್ಟುವಂತೆ ಮಾಡಿದೆ. ಇನ್ನು ಆರೋಗ್ಯ ಇಲಾಖೆಯೊಂದಿಗೆ ಸ್ಥಳೀಯ ಶಾಸಕರು ಸಭೆ ನಡೆಸಿ ಔಷಧ ಇಲ್ಲದ ಕಾರಣ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.