Belagavi: ಬೆಳಗಾವಿಯ (BGM Winter Session – besieging) ಸುವರ್ಣ ಸೌಧದಲ್ಲಿ ಇದೇ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ (Belagavi Winter Session) ನಡೆಯಲಿದ್ದು,
ಕರ್ನಾಟಕ ರಾಜ್ಯ ರೈತ ಸಂಘದ ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್
(Kodihalli Chandrashekar) ಅವರು ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು
ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ರೈತರ ವಿವಿಧ ಬೇಡಿಕಗಳನ್ನು ಈಡೇರಿಸಲು ಆಗ್ರಹಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ (Suvarna Soudha) ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿದ
ಬಳಿಕ ಅದನ್ನು ವಾಪಸ್ ಪಡೆದಿದೆ. ಆದ್ರೆ, ರಾಜ್ಯ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲ.ಆದರೆ ಬಿಜೆಪಿಯವರು (BJP) ತಂದಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿ ಎಂದು ಕಿಡಿಕಾರಿದರು.
ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿ ಸಿ ಎಂ ಡಿ.ಕೆ.ಶಿವಕುಮಾರ್ ಬೆಂಬಲಿಸಿ ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ
ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾಗಿದ್ದರು. ಬಿಜೆಪಿ ಜಾರಿ ತಂದ ಭೂಸುಧಾರಣಾ ಕಾಯ್ದೆಯನ್ನ ಅನುಷ್ಠಾನಗೊಳಿಸುವ ಕೆಲಸವನ್ನ ಕಾಂಗ್ರೆಸ್ (Congress) ಅಚ್ಚುಕಟ್ಟಾಗಿ ಮಾಡುತ್ತಿದೆ
ಆದರೆ ಆಗ ವಿಪಕ್ಷದವರು ವಿರೋಧಿಸಿ (BGM Winter Session – besieging) ವಾಗ್ದಾಳಿ ನಡೆಸಿದರು.
ಇನ್ನು ಬರಗಾಲದಿಂದ ರೈತರು ತತ್ತರಿಸಿದ್ದರೂ ಈವರೆಗೂ ಪರಿಹಾರ ಬಂದಿಲ್ಲ. ಮೋದಿ (Modi) ಸರ್ಕಾರ ರೈತರಿಗೆ 2 ಸಾವಿರ ಕೊಡುತ್ತಿತ್ತು ಮತ್ತೆ ರಾಜ್ಯ ಬಿಜೆಪಿ ಸರ್ಕಾರ 2 ಸಾವಿರ ಸೇರಿಸಿ
ಕೊಡುತ್ತಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಈಗ 2 ಸಾವಿರ ರೂಪಾಯಿ ಕೊಡದೆ ಹೈನುಗಾರಿಕೆ ಯೋಜನೆಯಲ್ಲಿ ಸರ್ಕಾರ ರೈತರಿಂದ 4 ರೂಪಾಯಿ ಹಗಲು ದರೋಡೆ ಮಾಡುತ್ತಿದೆ.
ಕಬ್ಬು ಬೆಳೆಗಾರರಿಗೆ ಈವರೆಗೂ ಸೂಕ್ತ ದರ ಸಿಗುತ್ತಿಲ್ಲ. ಯಾವುದೇ ಕಾರ್ಖಾನೆಗಳು ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾವೇರಿ ರೈತರಿಗೆ ಒಂದು ದರ, ಹುಬ್ಬಳ್ಳಿ ಧಾರವಾಡ (Hubli-Dharwad),
ಕಾರವಾರದ ರೈತರಿಗೆ ಮತ್ತೊಂದು ದರ ಕೊಡುತ್ತಿದ್ದಾರೆ ಎಂದು ಜನರು ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದೇ ಒಂದು ರೈತ ಪರ ಯೋಜನೆ ಮಾಡಿಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನದ ದಿನವೇ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್
- ಮೇಘಾ ಮನೋಹರ ಕಂಪು