• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತ ಬಂದ್‌ಗೆ ದೇಶಾದ್ಯಂತ ವ್ಯಾಪಕ ಬೆಂಬಲ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಭಾರತ ಬಂದ್‌ಗೆ ದೇಶಾದ್ಯಂತ ವ್ಯಾಪಕ ಬೆಂಬಲ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 7: ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ಕಳೆದ 11 ದಿನಗಳಿಂದ ಪ್ರತಿಭಟನೆಯಲ್ಲಿ ನಿರತರಾಗಿದ್ದು, ರೈತರು ನಾಳೆ ಕರೆ ನೀಡಿರುವ ಭಾರತ್ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ದೇಶದ ವಿವಿಧ ರಾಜಕೀಯ ಪಕ್ಷಗಳು ರೈತರ ಬೆಂಬಲಕ್ಕೆ ನಿಂತಿದ್ದು , ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕೃಷಿ ಮಸೂದೆಯನ್ನು ಕೈ ಬಿಡುವಂತೆ ಒತ್ತಾಯಿಸಿವೆ.

ನಿನ್ನೆ 14ಕ್ಕೂ ಹೆಚ್ಚು ರಾಜಕೀಯ ಪಕ್ಷಗಳು ಭಾರತ್ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೇ ಇಂದು ಸಮಾಜವಾದಿ ಪಕ್ಷ , ಎನ್‍ಸಿಪಿ ಹಾಗೂ ಬಿಎಸ್‍ಪಿ ಪಕ್ಷಗಳು ರೈತರ ಬೆಂಬಲಕ್ಕೆ ನಿಂತಿವೆ. ತಮ್ಮ ನ್ಯಾಯ ಸಮ್ಮತ ಬೇಡಿಕೆ ಈಡೇರಿಕೆಗಾಗಿ ರೈತರು ಕರೆ ನೀಡಿರುವ ಭಾರತ್ ಬಂದ್‍ಗೆ ನಮ್ಮ ಬೆಂಬಲವಿದೆ. ಕೂಡಲೇ ಕೇಂದ್ರ ಸರ್ಕಾರ ಕೃಷಿ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಇಂದು ಟ್ವೀಟ್ ಮಾಡಿದ್ದಾರೆ.

ರೈತರು ಕರೆ ನೀಡಿರುವ ಭಾರತ್ ಬಂದ್‍ನಲ್ಲಿ ಬಿಎಸ್ಪಿ ಪಕ್ಷದ ಕಾರ್ಯಕರ್ತರು ಕೈ ಜೋಡಿಸುವಂತೆ ಮಾಯಾವತಿ ಅವರು ಮನವಿ ಮಾಡಿದ್ದಾರೆ. ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾರತ್ ಬಂದ್‍ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದು , ಸಂಕಷ್ಟದಲ್ಲಿರುವ ಕೃಷಿ ಸಮಾಜ ಬೆಂಬಲಕ್ಕೆ ತಮ್ಮ ಪಕ್ಷ ನಿಲ್ಲಲಿದೆ ಎಂದು ಘೋಷಿಸಿದ್ದಾರೆ.

ರೈತರು ಸೇರಿರುವ ದೆಹಲಿಯ ಸಿಂಘು ಗಡಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾರತ್ ಬಂದ್‍ಗೆ ಬೆಂಬಲ ಘೋಷಿಸಿದ್ದಾರೆ. ನಿನ್ನೆಯಷ್ಟೇ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ಕೇಜ್ರಿವಾಲ್ ಅವರು ಇಂದು ಮುಂಜಾನೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಿಂಘು ಗಡಿಗೆ ಆಗಮಿಸಿ ಹೋರಾಟ ನಿರತ ರೈತರಿಗೆ ನೀಡಿರುವ ಸೌಕರ್ಯಗಳ ಪರಿಶೀಲನೆ ನಡೆಸಿದರು.

ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ನಿಮ್ಮ ಸೇವಾಧಾರನಾಗಿ ಇಲ್ಲಿಗೆ ಆಗಮಿಸಿದ್ದೇನೆ. ನಿಮ್ಮ ಹೋರಾಟಕ್ಕೆ ಸದಾ ನಮ್ಮ ಪಕ್ಷದ ಬೆಂಬಲವಿರಲಿದೆ ಎಂದು ರೈತ ಸಮುದಾಯಕ್ಕೆ ಕೇಜ್ರಿವಾಲ್ ಅಭಯ ನೀಡಿದ್ದಾರೆ. ರೈತರ ಪ್ರತಿಭಟನೆಗೆ ದೆಹಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹರಿಯಾಣ ಹಾಗೂ ಉತ್ತರಪ್ರದೇಶ ಗಡಿಯಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆಯನ್ನು ಮಾಡಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.