ಪುನೀತ್‌ಗೆ ಭಾರತ ರತ್ನ ನೀಡಿ – ಶರತ್‌ ಕುಮಾರ್

ಬೆಂಗಳೂರುನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರಿಗೆ ‘ಭಾರತ ರತ್ನ’ ಪ್ರಶಸ್ತಿ(Bharat Ratna Award)ನೀಡಬೇಕೆಂದು ದಕ್ಷಿಣ ಭಾರತದ ಖ್ಯಾತ ಹಿರಿಯ ನಟ ಶರತ್ ಕುಮಾರ್ ಒತ್ತಾಯಿಸಿದ್ದಾರೆ. ‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ತಂದೆಯ ಪಾತ್ರವನ್ನು ಮಾಡಿದ್ದ ಶರತ್​ಕುಮಾರ್(Sarath Kumar)​ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ ನಮನ’(Appu Namana) ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದರು.

‘ಪುನೀತ್​ ರಾಜ್​ಕುಮಾರ್ ಜೊತೆಗೆ ಒಳ್ಳೆಯ ಒಡನಾಟ ಇತ್ತು. ಪುನೀತ್​ ಇಷ್ಟು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ. ‘ರಾಜಕುಮಾರ’ ಸಿನಿಮಾದ 100ನೇ ದಿನದ ಸಂಭ್ರಮವನ್ನು ಬೆಂಗಳೂರಿನಲ್ಲಿಯೇ ಮಾಡಿದ್ದೆವು. ಈಗ ಇಲ್ಲಿಯೇ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ. ಈ ರೀತಿ ಆಗುತ್ತದೆ ಎಂದು ನಾನು ಖಂಡಿತ ಅಂದುಕೊಂಡಿರಲಿಲ್ಲ. ನನಗೆ ಈಗ 67 ವರ್ಷ. ಬಹುಶಃ ಪುನೀತ್​ ನನ್ನ ಶ್ರದ್ಧಾಂಜಲಿಗೆ ಬರಹುದು ಎಂದುಕೊಂಡಿದ್ದೆ. ದೇವರು ಪುನೀತ್​ ಬದಲಿಗೆ ನನ್ನನ್ನು ಕರೆದುಕೊಳ್ಳಬಹುದಿತ್ತು’ ಎಂದು ಶರತ್ ಕುಮಾರ್ ದುಃಖದಲ್ಲಿ ಮಾತನಾಡಿದರು.

‘ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ಇದಕ್ಕಾಗಿ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು. ನಟನೆಯ ಜೊತೆಗೆ ಅನೇಕ ಸೇವಾ ಕಾರ್ಯಗಳ ಮೂಲಕ ಪುನೀತ್ ಸಮಾಜ ಸೇವೆ ಮಾಡಿದ್ದಾರೆ. ಅವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದಿಯಾಗಿದೆ. ತಮ್ಮ ಚಿತ್ರಗಳ ಮೂಲಕ ಅಪ್ಪು ಸಮಾಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಯಾರಿಗೂ ಗೊತ್ತಾಗದಂತೆ ಸಮಾಜ ಸೇವೆ ಮಾಡಿರುವ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.   

ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ(Padma Shri)ನೀಡಿ ಗೌರವಿಸಬೇಕೆಂದು ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಒತ್ತಾಯಿಸಿದ್ದಾರೆ.  ರಾಜ್ಯ ಸರ್ಕಾರ ಪುನೀತ್ ಅವರಿಗೆ ‘ಕರ್ನಾಟಕ ರತ್ನ’ ಬಿರುದು ನೀಡಿಲು ನಿರ್ಧರಿಸಿರುವುದು ಸ್ವಾಗತಾರ್ಹ. ಇದಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಪುನೀತ್ ಅವರ ಸಮಾಜಿ ಸೇವೆ ಪರಿಗಣಿಸಿ ಅವರಿಗೆ ಮರಣೋತ್ತರವಾಗಿ ‘ಪದ್ಮಶ್ರೀ’ ಪ್ರಶಸ್ತಿ ನೀಡಲು ಶೀಘ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಶಿಫಾರಾಸು‌ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.

Exit mobile version