ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ 7 ಮಂದಿ ಸಾವು

ವಿಕರಬಾದ್, ಡಿ. 26: ಶನಿವಾರ ಬೆಳಗ್ಗೆ ತೆಲಂಗಾಣದ ವಿಕರಬಾದ್​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೊಮಿನ್​ಪೇಟಾ ವಲಯದ ಇಜರಾಚಿಟ್ಟಂಪಲ್ಲಿ ಬಳಿ ದುರಂತ ನಡೆದಿದ್ದು, ಆರ್​ಟಿಸಿ ಬಸ್​-ಲಾರಿ-ಆಟೋ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಅನೇಕ ಮಂದಿಗೆ ಗಂಭೀರ ಗಾಯಳಾಗಿವೆ. ರಸ್ತೆ ಪಕ್ಕದಲ್ಲಿ ಆರ್​ಟಿಸಿ ಬಸ್​ ಪಾರ್ಕ್​ ಮಾಡಲಾಗಿತ್ತು. ಅದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಆಟೋ ಸೈಡಿಗೆ ಹಾಕಲು ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಹಾರಿ ಬಿದ್ದಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಲಾರಿಯು ಸಹ ಉರುಳಿಬಿದ್ದಿರುವುದರಿಂದ ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಬೆಳಗಿನ ಜಾವ ಮಸುಕಾಗಿದ್ದರಿಂದ ರಸ್ತೆ ಕಾಣದೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಮೃತರ ದೇಹಗಳನ್ನು ಹೊರ ತೆಗೆಯಲಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಮಾಹಿತಿ ಬಂದಿದೆ. ಇನ್ನು ಹೆಚ್ಚಿನ ಮಾಹಿತಿ ತನಿಖೆಯ ನಂತರವಷ್ಟೇ ತಿಳಿಯಲಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version