ಬೈಕಿಗೆ ಟಿಪ್ಪರ್ ಡಿಕ್ಕಿ ತಾಯಿ-ಮಗು ಸ್ಥಳದಲ್ಲೇ ಸಾವು

ಬೆಂಗಳೂರು ಅ 25 : ನಗರದಿಂದ ಕುಟುಂಬ ಸಮೇತ ತಮಿಳುನಾಡಿಗೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿ ತಾಯಿ-ಮಗು ಸಾವನ್ನಪ್ಪಿರುವ ಘಟನೆ ಒಲ್ಡ್ ಏರ್ ಪೋರ್ಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ‌.
ಶ್ರೀದೇವಿ (21), ದೀಕ್ಷಿತ(1) ಮೃತ ತಾಯಿ-ಮಗು. ಘಟನೆಯಲ್ಲಿ ಶಿವಕುಮಾರ್ ಗಾಯಗೊಂಡಿದ್ದಾರೆ. ಕೆ.ಆರ್‌‌.ಪುರ‌ ನಿವಾಸಿಗಳಾದ ಶಿವಕುಮಾರ್ ಮೂಲತಃ ತಮಿಳುನಾಡಿನ ಧರ್ಮಪುರಿ ಮೂಲದವರಾಗಿದ್ದಾರೆ‌.‌ ಇಂದು ಬೆಳಗ್ಗೆ ಊರಿಗೆ ಹೋಗಲು ಶಿವಕುಮಾರ್ ನಿರ್ಧರಿಸಿ ತಮ್ಮ ಬುಲೆಟ್ ಬೈಕಿನಲ್ಲಿ ಪ್ರಯಾಣ ಬೆಳೆಸಿದ್ದರು. ಮಾರತ್ ಹಳ್ಳಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಟಿಪ್ಪರ್ ಲಾರಿ ವೇಗವಾಗಿ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ಕಳೆದುಕೊಂಡು ಬೈಕ್ ಗೆ ಗುದ್ದಿದೆ. ಪರಿಣಾಮ ರಸ್ತೆಯಲ್ಲಿ ಕೆಳಗೆ ಬಿದ್ದು ರಕ್ತಸ್ರಾವವಾಗಿ ಬಿದ್ದಿದ್ದಾನೆ. ಶ್ರೀದೇವಿ ಹಾಗೂ ದೀಕ್ಷಿತ್ ಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಹೆಲ್ಮೆಟ್ ಧರಿಸಿದ್ದರಿಂದ ಶಿವಕುಮಾರ್ ದುರ್ಘಟನೆಯಿಂದ ಪಾರಾಗಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರ ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗ ಕಾರಣರಾದ ಟಿಪ್ಪರ್ ಚಾಲಕನನ್ನು ವಶಕ್ಕೆ‌ ಪಡೆದುಕೊಂಡು ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Exit mobile version