Belagavi: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನನಕ್ಕೆ ಇಂದು (ಶುಕ್ರವಾರ) ಕೊನೆಯ (BJP and JDS against Kar Govt) ದಿನವಾಗಿದ್ದು, ಈ ದಿನದಂದು ಉಪಮುಖ್ಯಮಂತ್ರಿ
ಡಿಕೆ ಶಿವಕುಮಾರ್ (D K Shivakumar) ಅವರ ವಿರುದ್ಧದ ಸಿಬಿಐ ಕೇಸ್ ಅನುಮತಿ ವಾಪಸ್ ಹಾಗೂ ವರ್ಗಾವಣೆ ದಂಧೆಯ ವಿಚಾರವಾಗಿ ಪ್ರಸ್ತಾಪ ಮಾಡಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ
ನಡೆಸಲು ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್ (BJP and JDS against Kar Govt) ಸಿದ್ಧತೆ ಮಾಡಿಕೊಂಡಿದೆ.
ಈ ಹಿಂದಿನ ಕಲಾಪಗಳಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Jameer Ahamed Khan) ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಸದನದಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕೊನೆಯ ದಿನ ಡಿಕೆ
ಶಿವಕುಮಾರ್ ಪ್ರಕರಣ ಮತ್ತು ವರ್ಗಾವಣೆ ದಂಧೆ ವಿಚಾರವಾಗಿ ಸರ್ಕಾರದ ವಿರುದ್ಧ ತಿರುಗಿ ಬೀಳುವ ಸಾಧ್ಯತೆ ದಟ್ಟವಾಗಿದೆ. ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಸಿಎಂ ಸಿದ್ದರಾಮಯ್ಯ
(C M Siddaramaiah) ಅವರು ಉತ್ತರ ಕರ್ನಾಟಕ ವಿಚಾರವಾಗಿ ಉತ್ತರ ಕೊಡಲಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕೊಟ್ಟ ಬಳಿಕ ವಿಧಾನ ಪರಿಷತ್ನಲ್ಲೂ ಉತ್ತರ ಕೊಡಲಿದ್ದಾರೆ. ಮುಖ್ಯಮಂತ್ರಿಗಳ ಉತ್ತರದ ಬಳಿಕ ಡಿಕೆ ಶಿವಕುಮಾರ್ (D K Shivakumar) ಅವರ ವಿರುದ್ಧ ಸಿಬಿಐ
ತನಿಖೆಗೆ ಅನುಮತಿ ವಾಪಸ್ ವಿಚಾರವಾಗಿ ಸರ್ಕಾರದ ನಡೆಯನ್ನು ಬಿಜೆಪಿ (BJP) ಸದನದಲ್ಲಿ ಪ್ರಸ್ತಾಪ ಮಾಡಲಿದ್ದು, ಈಗಾಗಲೇ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಈ ವಿಚಾರವನ್ನು
ಹಿರಿಯರ ಜೊತೆಗೆ ಚರ್ಚೆ ಮಾಡಿ ಸದನದಲ್ಲಿ ಪ್ರಸ್ತಾಪ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರ ಹಲೋ ಅಪ್ಪ ಫೋನ್ ಸಂಭಾಷಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಅಸ್ತ್ರವನ್ನು
ಬಿಜೆಪಿ ಹಾಗೂ ಜೆಡಿಎಸ್ (JDS) ಪ್ರಸ್ತಾಪ ಮಾಡುವ ಸಾಧ್ಯತೆ ಇದೆ.
ಸಿಎಂ ಉತ್ತರದ ಬಳಿಕ ವಿಪಕ್ಷಗಳು ಈ ವಿಚಾರವನ್ನು ಪ್ರಸ್ತಾಪ ಮಾಡಲಿರುವ ಬಿಜೆಪಿ ನಡೆಯಿಂದ ಗದ್ದಲ ಉಂಟಾಗುವ ಸಾಧ್ಯತೆ ಇದ್ದು, ಸರ್ಕಾರದ ಉತ್ತರಕ್ಕೆ ವಿಪಕ್ಷಗಳು ಆಗ್ರಹಿಸಿ ಧರಣಿ ನಡೆಸುವ
ಯೋಚನೆಯನ್ನು ಮಾಡುತ್ತಿವೆ. ಹೀಗಾದಲ್ಲಿ ಆಧಿವೇಶನದ ಕೊನೆಯ ದಿನ ಸದನದಲ್ಲಿ ತೀವ್ರ ಗದ್ದಲದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಗೋಚರಿಸುತ್ತಿದೆ.
ಅಧಿವೇಶನಕ್ಕೂ ಮೊದಲು ಸದನದಲ್ಲಿ ವರ್ಗಾವಣೆ ದಂಧೆ ಹಾಗೂ ಡಿಕೆ ಶಿವಕುಮಾರ್ ಅವರ ಕೇಸ್ ವಿಚಾರವಾಗಿ ಪ್ರಸ್ತಾಪ ಮಾಡುವುದಾಗಿ ಆರ್ ಅಶೋಕ (R Ashok) ಅವರು ತಿಳಿಸಿದ್ದರು. ಆದರೆ 9ನೇ
ದಿನದವರೆಗೂ ಈ ವಿಚಾರವನ್ನು ಯಾರೂ ಪ್ರಸ್ತಾಪ ಮಾಡಿರಲಿಲ್ಲ. ಬದಲಾಗಿ ಜಮೀರ್ ಅಹ್ಮದ್ ಖಾನ್ ಸ್ಪೀಕರ್ ಕುರಿತಾದ ಹೇಳಿಕೆಯನ್ನು ಪ್ರಸ್ತಾಪಿಸಿ ಧರಣಿ ನಡೆಸಿತ್ತು ಬಿಜೆಪಿ ಮತ್ತು ಜೆಡಿಎಸ್.
ಇದನ್ನು ಓದಿ: ಡಿಜಿಟಲ್ ಅರೆಸ್ಟ್ ವಂಚನೆ: ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 3 ಕೋಟಿ ಕಳೆದುಕೊಂಡ 7 ಜನರು
- ಭವ್ಯಶ್ರೀ ಆರ್ ಜೆ