ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಸಾರ್ವಜನಿಕರಿಗೆ ಒಪ್ಪಿಸುವ ಬಗ್ಗೆ ಕಾಂಗ್ರೆಸ್ ಕೆಲ ಮುಖಂಡರಿಂದ ಅಪಸ್ವರ ಕೇಳಿ ಬಂದ ಹಿನ್ನಲೆಯಲ್ಲಿ ಬಿಜೆಪಿ ಕಾಂಗ್ರೆಸ್ಗೆ ತಿರುಗೇಟು ನೀಡಿದೆ. ಬಿಜೆಪಿ ಆರ್ಎಸ್ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಾಲಯಗಳನ್ನು ಹಸ್ತಾಂತರಿಸುವ ಅಜೇಂಡಾ ಎಂದು ಆರೋಪಿಸಿದ ಡಿಕೆ ಶಿವಕುಮಾರ್ ಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.ಈ ಕುರಿತು ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಆಲೋಚನೆ ಇದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಭಕ್ತರು ಅಂದರೆ ಬಿಜೆಪಿ, ಆರ್ ಎಸ್ಎಸ್ ಕಾರ್ಯಕರ್ತರು ಆಗಿರಬಹುದು, ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ದೇವಾಲಯಗಳಿಗೆ ಭಕ್ತರು ಅಂದರೆ ದೇವಾಲಯಗಳಿಗೆ ಎಲ್ಲರು ಬರುತ್ತಾರೆ.ಹೀಗಾಗಿ ದೇವಸ್ಥಾನಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ನಾವು ಭಕ್ತರಿಗೆ ಕೊಡಬೇಕೆಂದು ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ. ಯಾವುದೇ ಕಾರಣಕ್ಕೂ ಸರ್ಕಾರ ಹಿಂದೂ ದೇವಾಲಯಗಳನ್ನು ಯಾವುದೆ ಸಂಘ ಸಂಸ್ಥೆಗೆ ನೀಡುವುದಿಲ್ಲ ಎಂದು ತಿಳಿಸಿದರು.
ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಕೋಟಾ
- Categories: Vijaya Time
Related Content
ಆಗ್ನೇಯ ಮಧ್ಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕ: ಈಗಲೇ ಅರ್ಜಿ ಸಲ್ಲಿಸಿ
By
Shameena Mulla
May 3, 2024
ಕೊತ್ವಾಲ್ನ ಶಿಷ್ಯ ಡಿಕೆ ಶಿವಕುಮಾರ್ನ ಪಟಾಲಂ ತಮ್ಮ ಹಳೆಚಾಳಿ ಮುಂದುವರಿಸಿದ್ದಾರೆ – ಡಿಕೆ ಮೇಲೆ ಮುಗಿಬಿದ್ದ ಜೆಡಿಎಸ್
By
Bhavya
April 13, 2024
5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
By
Bhavya
March 23, 2024