ಬಿಜೆಪಿ ಗೆಲುವು ಖಚಿತ; ಘೋಷಣೆಯಷ್ಟೇ ಬಾಕಿ

ಬೆಂಗಳೂರು, ನ. 10: ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಇಂತಹ ಹಣಾಹಣಿಯ ನಡುವೆಯೂ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಗೆಲುವಿನ ನಗೆಯನ್ನು ಬೀರಿದರೆ, ಆರ್‌ ಆರ್‌ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿಯಾಗಿ ಗೆಲುವಿನ ಹೊಸ್ತಿಲಲ್ಲಿದ್ದಾರೆ.

ಜೆಡಿಎಸ್‌ ಕ್ಷೇತ್ರವಾಗಿದ್ದ, ಶಿರಾದಲ್ಲಿ ಬಿಜೆಪಿಯ ರಾಜೇಶ್ ಗೌಡ ಹಾಗೂ ಕಾಂಗ್ರೆಸ್ನ ಟಿಬಿ ಜಯಚಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇಂತಹ ಪೈಪೋಟಿಯ ನಡುವೆಯೂ 63299 ಮತಗಳನ್ನು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪಡೆದುಕೊಂಡು ಮುನ್ನಡೆಯನ್ನು ಸಾಧಿಸಿ, ಗೆಲುವಿನ ಹೊಸ್ತಿಲಲ್ಲಿ ನಿಂತಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 1,24,446 ಮತಗಳನ್ನು ಪಡೆದುಕೊಂಡು, ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿಯನ್ನು ಸೋಲಿಸಿ ಕೈ ಕ್ಷೇತ್ರದಲ್ಲಿ ಕಮಲವನ್ನು ಅರಳಿಸುವುದು ಖಚಿತವಾಗಿದೆ. ಇಬ್ಬರ ಗೆಲುವು ಬಹುತೇಕ ಖಚಿತಗೊಂಡಿದ್ದು, ಘೋಷಣೆಯಷ್ಟೇ ಬಾಕಿ ಇದೆ.

Exit mobile version