• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

Politics : ಸಿಎಂ, ಕೇಂದ್ರ ಸಚಿವ ಸ್ಥಾನ ಕಳೆದುಕೊಂಡಿದ್ದವರಿಗೆ ಬಿಜೆಪಿಯಿಂದ ಗುರುತರ ಹೊಣೆ!

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

India : ಬೇರೆ ಬೇರೆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿ(Chief Minister) ಸೇವೆ ಸಲ್ಲಿಸುತ್ತಿದ್ದಾಗಲೇ,

ಹೈಕಮಾಂಡ್ ಸೂಚನೆ ಮೇರೆಗೆ ಆ ಹುದ್ದೆಗೆ ರಾಜೀನಾಮೆ(Resign) ಕೊಟ್ಟು ಹೊರಬಂದಿದ್ದ ಹಾಗೂ ಕೇಂದ್ರ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿಜೆಪಿ(BJP) ನಾಯಕರಿಗೆ ಬಿಜೆಪಿ ಹೈಕಮಾಂಡ್, ಹೊಸ ಜವಾಬ್ದಾರಿಗಳನ್ನು ನೀಡಿದೆ.

BJP Highcommand new decisions

2024ರ ಮಹಾ ಚುನಾವಣೆಗೆ ನಾನಾ ರಾಜ್ಯಗಳಲ್ಲಿ ಬಿಜೆಪಿಯನ್ನು ಸಂಘಟಿಸುವ ಹೊಣೆಗಾರಿಕೆಯನ್ನು ಅವರಿಗೆ ನೀಡಲಾಗಿದೆ.

ಇದೀಗ ಅವರಿಗೆ ರಾಜ್ಯಗಳ ಉಸ್ತುವಾರಿ ನೀಡುವ ಮೂಲಕ ಪಕ್ಷ ನಿಮ್ಮ ಸೇವೆಯನ್ನು ಗೌರವಿಸುತ್ತದೆ ಎಂಬ ಸಂದೇಶ ನೀಡಿದೆ.

ಹೈಕಮಾಂಡ್‌ನ (Highcommand) ಈ ಹೊಸ ನಿರ್ಧಾರದಿಂದ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ಸಿಗಲಿದೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಗುಜರಾತ್(Gujarat) ಮಾಜಿ ಮುಖ್ಯಮಂತ್ರಿ ವಿಜಯ್ ರುಪಾನಿ, ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇಬ್, ಕೇಂದ್ರದ ಮಾಜಿ ಸಚಿವರಾದ ಪ್ರಕಾಶ್ ಜಾವಡೇಕರ್ ಹಾಗೂ ಮಹೇಶ್ ಶರ್ಮಾ ಅವರಿಗೆ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ.

ವಿಜಯ್ ರುಪಾಣಿಯವರಿಗೆ ಪಂಜಾಬ್ ನ ಬಿಜೆಪಿ ಉಸ್ತುವಾರಿ ವಹಿಸಲಾಗಿದ್ದರೆ, ಬಿಪ್ಲಬ್ ದೇಬ್ ಅವರಿಗೆ ಹರ್ಯಾಣ ಬಿಜೆಪಿಯ ಉಸ್ತುವಾರಿ ನೀಡಲಾಗಿದೆ.

ಇದನ್ನೂ ಓದಿ : https://vijayatimes.com/kerala-man-covers-his-face-from-honey-bee/

ಪ್ರಕಾಶ್ ಜಾವಡೇಕರ್ ಅವರಿಗೆ ಕೇರಳ ಬಿಜೆಪಿ(Kerala BJP) ಹೊಣೆಗಾರಿಕೆ ನೀಡಲಾಗಿದ್ದರೆ, ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿನೋದ್ ತಾವ್ಡೆ ಅವರಿಗೆ ಬಿಹಾರದ ಬಿಜೆಪಿ ಉಸ್ತುವಾರಿ ವಹಿಸಲಾಗಿದೆ.

ಈ ಮೊದಲು ತಾವ್ಡೆ ಅವರಿಗೆ ಹರ್ಯಾಣ ಬಿಜೆಪಿ ಉಸ್ತುವಾರಿ ವಹಿಸಲಾಗಿತ್ತು.

ಓಮ್‌ ಮಾಥೂರ್‌ ಅವರನ್ನು ಛತ್ತಿಸ್‌ಗಢಕ್ಕೆ ಮತ್ತು ಮಂಗಲ್‌ ಪಾಂಡೆ ಅವರನ್ನು ಪಶ್ಚಿಮ ಬಂಗಾಳಕ್ಕೆ ನೇಮಿಸಲಾಗಿದೆ. ಲಕ್ಷ್ಮಿಕಾಂತ್‌ ಬಾಜ್‌ಪಾಯ್‌ ಅವರನ್ನು ಜಾರ್ಖಂಡ್‌, ಡಾ. ಮಹೇಶ್‌ ಶರ್ಮಾ ಅವರನ್ನು ತ್ರಿಪುರಾ ರಾಜ್ಯಕ್ಕೆ ನೇಮಿಸಲಾಗಿದೆ.

ಕೆಲವು ನಾಯಕರಿಗೆ ಈಗಾಗಲೇ ವಹಿಸಲಾಗಿರುವ ಜವಾಬ್ದಾರಿಯಲ್ಲಿ ಅವರನ್ನು ಹಾಗೆಯೇ ಮುಂದುವರಿಸಲಾಗಿದೆ.

BJP - Highcommand new decisions

ಅರುಣ್ ಸಿಂಗ್ ಅವರನ್ನು ರಾಜಸ್ಥಾನ ಬಿಜೆಪಿಗೆ, ಮುರಳೀಧರ ರಾವ್ ಅವರನ್ನು ಮಧ್ಯಪ್ರದೇಶ ಬಿಜೆಪಿ ಉಸ್ತುವಾರಿಯಲ್ಲೇ ಮುಂದುವರಿಸಲಾಗಿದೆ.

ಕರ್ನಾಟಕದ ಬಿಜೆಪಿ ಉಸ್ತುವಾರಿಯನ್ನಾಗಿ 2020ರಲ್ಲಿ ನೇಮಕಗೊಂಡಿದ್ದ ಅರುಣ್ ಸಿಂಗ್ ಅವರನ್ನೇ ಬಿಜೆಪಿಯಲ್ಲಿ ಮುಂದುವರಿಸಲಾಗಿದೆ.

ಇಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಲ್ಲಿಗೆ, 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಿಜೆಪಿಯು ಅರುಣ್ ಸಿಂಗ್ ಅವರ ಮೇಲುಸ್ತುವಾರಿಯಲ್ಲೇ ಎದುರಿಸುವುದು ಪಕ್ಕಾ ಆಗಿದೆ.
Tags: bjpKarnatakapoliticalpolitics

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.