• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಾಷ್ಟ್ರಗೀತೆ ತಪ್ಪೇ? ಇದೇನು ರಾಹುಲ್ ಗಾಂಧಿ? ; ತಪ್ಪಾದ ರಾಷ್ಟ್ರಗೀತೆಯ ಸಂಗೀತಕ್ಕಾಗಿ ರಾಹುಲ್ ವಿರುದ್ದ ಬಿಜೆಪಿ ವಾಗ್ದಾಳಿ

Mohan Shetty by Mohan Shetty
in ರಾಜಕೀಯ
ರಾಷ್ಟ್ರಗೀತೆ ತಪ್ಪೇ? ಇದೇನು ರಾಹುಲ್ ಗಾಂಧಿ? ; ತಪ್ಪಾದ ರಾಷ್ಟ್ರಗೀತೆಯ ಸಂಗೀತಕ್ಕಾಗಿ ರಾಹುಲ್ ವಿರುದ್ದ ಬಿಜೆಪಿ ವಾಗ್ದಾಳಿ
0
SHARES
1
VIEWS
Share on FacebookShare on Twitter

Mumbai : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ(BJP Leaders Slams Rahul) ವೇಳೆ ರಾಷ್ಟ್ರಗೀತೆ ಹೆಸರಿನಲ್ಲಿ ತಪ್ಪು ಹಾಡಿನ ವಿಡಿಯೋ ವೈರಲ್(Viral) ಆಗುತ್ತಿದ್ದಂತೆ ಬಿಜೆಪಿ ನಾಯಕರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

BJP Leaders

ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಭಾರತ್ ಜೋಡೋ ಕಾರ್ಯಕ್ರಮದಲ್ಲಿ, ಕೆಲವು ನಿಮಿಷಗಳ ಕಾಲ ರಾಷ್ಟ್ರಗೀತೆಯ ಬದಲಿಗೆ ತಪ್ಪಾದ ಹಾಡಿನ ವೀಡಿಯೊವನ್ನು ಪ್ಲೇ ಮಾಡಲಾಗಿದ್ದು,

ಈ ತಪ್ಪಿಗೆ ಬಿಜೆಪಿ ನಾಯಕರು(BJP Leaders) ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್(Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ನಾಯಕ ನಿತೇಶ್ ರಾಣೆ ಅವರು ಘಟನೆಯ ವಿಡಿಯೋವನ್ನು ಹಂಚಿಕೊಂಡು “ಪಾಪು ಕಾ ಕಾಮಿಡಿ ಸರ್ಕಸ್” ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಕೂಡ ಅದೇ ವೀಡಿಯೊವನ್ನು ಹಂಚಿಕೊಂಡು, “ರಾಹುಲ್ ಗಾಂಧಿ, ಇದು ಏನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : https://vijayatimes.com/15-year-old-dies/

ಇನ್ನು ಭಾರತ್ ಜೋಡೋ ಕಾರ್ಯಕ್ರಮದಲ್ಲಿ ನಿಜವಾಗಿಯೂ ತಪ್ಪಾದ ಗೀತೆಯನ್ನು ನುಡಿಸಲಾಗಿದೆಯೇ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳು ಮತ್ತು ಭಾರತ್ ಜೋಡೋ ಯಾತ್ರೆಯ ನೇರ ಪ್ರಸಾರವು ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿರುವುದನ್ನು ಖಚಿತಪಡಿಸುತ್ತದೆ.

ವಾಶಿಮ್ನಲ್ಲಿ ರಾಹುಲ್ ಗಾಂಧಿಯವರ ಭಾಷಣದ ಕೊನೆಯಲ್ಲಿ, ರಾಷ್ಟ್ರಗೀತೆಯ ಘೋಷಣೆ ಇತ್ತು, ಅದನ್ನು ರಾಹುಲ್ ಗಾಂಧಿ ಕೂಡ ಮೈಕ್ನಲ್ಲಿ ಪುನರಾವರ್ತಿಸಿದರು.

ವೇದಿಕೆಯಲ್ಲಿದ್ದ ಮುಖಂಡರು ಸ್ಥಾನ ಪಡೆಯುತ್ತಿದ್ದಂತೆ ಕೆಲ ಸೆಕೆಂಡುಗಳ ಕಾಲ ಸಂಗೀತ ಮೊಳಗಿತು. ಆಗ ರಾಹುಲ್ ಗಾಂಧಿ ನಾಯಕರಿಗೆ ಸನ್ನೆ ಮಾಡಿ ಸಂಗೀತವನ್ನು ನಿಲ್ಲಿಸಿದರು. ನಂತರ ಜನ ಗಣ ಮನ ನುಡಿಸಲು ಸೂಚನೆ ನೀಡಿದರು.

Rahul Gandhi

“ಇದು ರಾಷ್ಟ್ರಗೀತೆ ಅಲ್ಲ ಎಂದು ಕಾಂಗ್ರೆಸ್ ನಾಯಕರು ಅರ್ಥಮಾಡಿಕೊಳ್ಳಲು ಬಹಳ ಸಮಯ ತೆಗೆದುಕೊಂಡಿದ್ದಾರೆ” ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇನ್ನು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪ್ರಸ್ತುತ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿದೆ.

https://youtu.be/wGmJe0Cl-KA ಅಕ್ರಮ ಸಕ್ರಮದಲ್ಲೇ ಅಕ್ರಮ!

ಬೆಲೆ ಏರಿಕೆ ವಿಚಾರವಾಗಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. “ರೈತರನ್ನು ನಾಶಮಾಡುವ ವ್ಯಕ್ತಿ ದೇಶಭಕ್ತನಾಗಲು ಸಾಧ್ಯವಿಲ್ಲ” ಎಂದು ಟೀಕಿಸಿದ್ದರು.

  • ಮಹೇಶ್.ಪಿ.ಎಚ್

Tags: bjpCongressIndiapoliticalpolitics

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.