• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಇಂದು ಬಿಜೆಪಿ MLA ಪಟ್ಟಿ ಬಿಡುಗಡೆ ಯಲ್ಲಿ ಹೆಚ್ಚಿನ ಹಳೆ ಮುಖಗಳಿಗೆ ಕೋಕ್‌, ಹೊಸ ಮುಖಗಳಿಗೆ ಅವಕಾಶ !

Teju Srinivas by Teju Srinivas
in ರಾಜಕೀಯ, ರಾಜ್ಯ
ಇಂದು ಬಿಜೆಪಿ MLA ಪಟ್ಟಿ ಬಿಡುಗಡೆ ಯಲ್ಲಿ ಹೆಚ್ಚಿನ ಹಳೆ ಮುಖಗಳಿಗೆ ಕೋಕ್‌, ಹೊಸ ಮುಖಗಳಿಗೆ ಅವಕಾಶ !
0
SHARES
212
VIEWS
Share on FacebookShare on Twitter

Bengaluru: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ ಆಗಲಿದ್ದು, ಹತ್ತು ಹಲವು ಲೆಕ್ಕಾಚಾರಗಳಿಗೆ ತೆರೆ ಬೀಳಲಿದೆ. ರಾಜ್ಯ ವಿಧಾನಸಭಾ ಚುನಾವಣೆಯನ್ನು ಗುಜರಾತ್‌ (Gujurat) ಮಾದರಿಯಲ್ಲಿ ಎದುರಿಸಲಿದೆಯಾ? ಹಳೆ ಮುಖಗಳಿಗೆ ಕೋಕ್‌ ಕೊಟ್ಟು ಹೊಸ ಆಭ್ಯರ್ಥಿಗಳಿಗೆ ಆದ್ಯತೆ ಸಿಗುತ್ತಾ (BJP list release today) ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಈ ಮಾದರಿ ಈಗ ಅನೇಕ ಹಿರಿಯ ನಾಯಕರಲ್ಲಿ ಆತಂಕ ಸೃಷ್ಟಿಸಿದೆ.

BJP list release today

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 1ತಿಂಗಳಷ್ಟೆ ಬಾಕಿಯಿದ್ದು ಬಿಜೆಪಿಯ(BJP) ಮೊದಲ ಪಟ್ಟಿ ಸೋಮವಾರ ಬಿಡುಗಡೆ ಆಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಈ ವಿಚಾರವಾಗಿ ಭಾನುವಾರ ಸುದೀರ್ಘ ಚರ್ಚೆ ನಡೆಸಲಾಗಿತ್ತು.

ಮೊದಲ ಪಟ್ಟಿಯಲ್ಲಿ ಅಚ್ಚರಿಯ ಹೊಸ ಹೆಸರುಗಳು ಇರಲಿದೆಯಾ ಎಂಬುದೇ ಈಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.


ಇಂದು ಮಧ್ಯಾಹ್ನದೊಳಗೆ ಬಿಜೆಪಿ ಅಭ್ಯರ್ಥಿಗಳು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಅಭ್ಯರ್ಥಿಗಳ ಹೆಸರು (BJP list release today) ಘೋಷಣೆಯಾಗುವ ಸಾಧ್ಯತೆಯಿದೆ.

ಗುಜರಾತ್ ಮಾದರಿಯಂತೆ ರಾಜ್ಯದಲ್ಲಿ ಸಹ ಹಾಲಿ ಶಾಸಕರ ಬದಲಾಗಿ ಕೆಲವೊಂದು ಕಡೆ ಹೊಸ ಮುಖಗಳಿಗೆ ಚಾನ್ಸ ಕೊಡುವ ಸಾಧ್ಯತೆ ಹೆಚ್ಚಿದೆ.

ಈ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ (High Command) ಸಾಕಷ್ಟು ಚರ್ಚೆ ನಡೆದಿದೆ. ಕೆಲವು ಕ್ಷೇತ್ರಗಳಲ್ಲಿ ಮಾತ್ರ ಹೊಸ ಮುಖಗಳಿಗೆ ಟಿಕೆಟ್ (Ticket) ಸಿಗುವ ಸಾಧ್ಯತೆ ನಿಚ್ಛಳವಾಗಿದೆ.

BJP list release today


ಇನ್ನು ಕಾಂಗ್ರೆಸ್‌ನ (Congress) ಕುಟುಂಬ ರಾಜಕಾರಣದ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿದ್ದ ಬಿಜೆಪಿ, ಯಡಿಯೂರಪ್ಪ(Yeddiyurappa) , ಈಶ್ವರಪ್ಪ ಮುಂತಾದ ಪ್ರಮುಖ ನಾಯಕರ ಮಕ್ಕಳಿಗೆ ಟಿಕೆಟ್‌ ಸಿಗುತ್ತಾ ಅನ್ನೋದು ಕೂಡ ಕುತೂಹಲ ಮೂಡಿಸಿರುವ ಅಂಶ.

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಈಗಾಗಲೇ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಿಲ್ಲ ಎಂಬುವುದನ್ನು ಘೋಷಣೆ ಮಾಡಿದ್ದಾರೆ.

ಶಿಕಾರಿಪುರದಲ್ಲಿ ಅವರ ಪುತ್ರ ಬಿವೈ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ. ಇನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದರೂ,

https://youtube.com/shorts/nonjJbhIJRU?feature=share

ಅವರ ಪುತ್ರ ಕಾಂತೇಶ್‌ಗೆ ಟಿಕೆಟ್ ಸಿಗುವಂತೆಯೂ ಲಾಬಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ ಹೊಸಕೋಟೆಯಲ್ಲಿ ಬಿಟಿ ನಾಗರಾಜ್‌ ಅವರೂ ತಮ್ಮ ಮಗನಿಗೆ ಟಿಕೆಟ್‌ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಸೇರಿದಂತೆ ಹಲವು ರಾಜ್ಯ ನಾಯಕರು ಬಿಜೆಪಿ ಕೇಂದ್ರೀಯ ಚುನಾವಣಾ ಸಭೆಯಲ್ಲಿ ಪಾಲ್ಗೊಂಡು ಇಂದು ಈ ಸಭೆಯಲ್ಲಿ ಅಂತಿಮವಾಗಿ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಮಾಡುವ ಸಾಧ್ಯತೆ ಇದೆ.

ರಂಜಿತಾ ಬಿ‌ ಆರ್

Tags: bengalurubjpCongressKarnataka

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.