Hubballi: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ನಡೆಯಲಿದ್ದು ಎಲ್ಲ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ವಿಶ್ವಕರ್ಮ ಸಮುದಾಯದ ನಾಯಕ ಕೆ.ಪಿ. ನಂಜುಂಡಿ (KP Nanjundi) ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಲ್ಲಿನ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ ನಿವಾಸಕ್ಕೆ ಆಗಮಿಸಿ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಕೆ.ಪಿ. ನಂಜುಂಡಿ (K P Nanjundi) ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B S Yediyurappa) ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ನಿಜಕ್ಕೂ ಆಶ್ಚರ್ಯ ಮೂಡಿಸಿದೆ.ನಿರ್ಲಕ್ಷ್ಯಕ್ಕೊಳಗಾದ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ (BJP) ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್ಸಿ (MLC) ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ (D K Shivakumar) ನನ್ನ ಮನೆಗೆ ಬಂದು ಹೋದ ನಂತರವೂ ಬಿಜೆಪಿಯವರು ಯಾರೊಬ್ಬರು ನನ್ನ ಮಾತನಾಡಿಸಿಲ್ಲ. ಯಾವ ನಿರೀಕ್ಷೆ ಇರಿಸಿಕೊಂಡು ಬಿಜೆಪಿಗೆ ಹೋಗಿದ್ದೇನೊ ಸಮಾಜ ಹಾಗೂ ಹಿಂದುಳಿದ ಸಮಾಜಗಳ ಹಿತ ದೃಷ್ಟಿಯಿಂದ ಅದು ಈಡೇರಲಿಲ್ಲ.ಬಿಜೆಪಿ ಅಧಿಕಾರದಲ್ಲಿದ್ದಾಗ ನನಗೆ ಸಚಿವ ಸ್ಥಾನ ನೀಡಬೇಕಿತ್ತು. ನನಗೆ ಅರ್ಹತೆ ಇತ್ತು. ಹಾಗಾಗಿ ಬುಧವಾರ ಬೆಳಗ್ಗೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯ ನಡೆಯಲಿದೆ. ಡಿಸಿಎಂ (DCM) ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಆಗುವೆ ಎಂದು ತಿಳಿಸಿದ್ದಾರೆ.