ಸಕ್ರಿಯ ರಾಜಕಾರಣದಿಂದ ನಿವೃತ್ರಿ ಘೋಷಿಸಿದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು, ಆ. 06: ಹಿರಿಯ ರಾಜಕೀಯ ಮುಖಂಡ ಹಾಗೂ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್, ತಮ್ಮ ಹುಟ್ಟುಹಬ್ಬದ ದಿನದಂದೇ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.

75ನೇ ವಸಂತಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ “ಶ್ರೀನಿವಾಸ್‌ ಪ್ರಸಾದ್‌ರ 50 ವರ್ಷದ ರಾಜಕೀಯ ಜೀವನ” ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ನಾನು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ. ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳುಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ನಿವೃತ್ತಿ ಘೋಷಿಸಿದರು.

ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ, ರಾಜಕೀಯ ಬೆಳವಣಿಗೆಗಳಿಂದಾಗಿ ಕಾರಣದಿಂದಾಗಿ ಮತ್ತೇ ಸ್ಪರ್ಧೆ ಮಾಡಿದ್ದೆ. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದು ಇಲ್ಲ ಎಂದು ಸ್ಪಷ್ಟಪಡಿಸಿದರು.

Exit mobile version