• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿರುದ್ಯೋಗಿಗಳಿಗೆ ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ ಕಾಂಗ್ರೆಸ್ ಹೇಳಿತ್ತು, ಈಗ ಅದರ ನೆನಪೇ ಇಲ್ಲ – ಬಿಜೆಪಿ ವ್ಯಂಗ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ನಿರುದ್ಯೋಗಿಗಳಿಗೆ ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ ಕಾಂಗ್ರೆಸ್ ಹೇಳಿತ್ತು, ಈಗ ಅದರ ನೆನಪೇ ಇಲ್ಲ – ಬಿಜೆಪಿ ವ್ಯಂಗ್ಯ
0
SHARES
28
VIEWS
Share on FacebookShare on Twitter

Karntaka: ನಿರುದ್ಯೋಗಿ ಯುವಕ ಯುವತಿಯರಿಗೆ 2,500 ರೂ. ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ(BJP satirical to congress) ಇದೇ ಕಾಂಗ್ರೆಸ್ ಪಕ್ಷ ಹೇಳಿತ್ತು.

ಆದರೆ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ಸಿಗರಿಗೆ ಅದರ ನೆನಪೇ ಇರಲಿಲ್ಲ. ವಿಧವೆಯರಿಗೆ ತಿಂಗಳಿಗೆ 1,000 ಮಾಸಿಕ ಪಿಂಚಣಿ ಕತೆಯೂ ಅಷ್ಟೇ, ಚುನಾವಣಾ ಘೋಷಣೆಗೆ ಮಾತ್ರ ಸೀಮಿತ ಎಂದು ರಾಜ್ಯ ಬಿಜೆಪಿ(State BJP) ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್‌(Twee) ಮಾಡಿರುವ ಬಿಜೆಪಿ, ಕಾಂಗ್ರೆಸ್‌ ರಾಜ್ಯದಲ್ಲಿ‌ ಇನ್ನಷ್ಟು ಯೋಜನೆ ಘೋಷಿಸಲಿ. ಪ್ರತಿಯೊಂದು ಯೋಜನೆಯೂ ಆ ಪಕ್ಷ ಅಸ್ತಿತ್ವಕ್ಕೆ ನಡೆಸುತ್ತಿರುವ ಹೆಣಗಾಟವನ್ನು ಜಗಜ್ಜಾಹೀರು ಮಾಡುತ್ತದೆ.

ಜತೆಗೆ  ಪ್ರಿಯಾಂಕಾ ಗಾಂಧಿ(Priyanka gandhi) ಅವರಿಗೆ ಈ ಕ್ಷಣಕ್ಕೆ ಹೇಳಿದ್ದು ಮರುಕ್ಷಣಕ್ಕೆ ನೆನಪಿರುವುದಿಲ್ಲ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಲೇವಡಿ ಮಾಡಿದೆ.

BJP satirical to congress

ಇನ್ನೊಂದು ಟ್ವೀಟ್‌ನಲ್ಲಿ,  ಈ ಮೊದಲು‌ ಕಾಲೇಜು ವಿದ್ಯಾರ್ಥಿಗಳನ್ನು ನೀವು ವಂಚಿಸಿದ್ದೀರಿ.

ವಿದ್ಯಾರ್ಥಿಗಳಿಗೆ ‌ಕಾಲೇಜಿಗೆ ಹೋಗಲು ಅನುಕೂಲವಾಗಲು ಬಡ್ಡಿ ರಹಿತ ಸಾಲ ನೀಡುತ್ತೇವೆ ಎಂದು  ಕಾಂಗ್ರೆಸ್‌ ಮಧ್ಯಪ್ರದೇಶದಲ್ಲಿ‌(BJP satirical to congress) ಹೇಳಿತ್ತು.

ಚುನಾವಣೆ ಕಳೆದ ಮೇಲೆ ಅದರ ಬಗ್ಗೆ ತುಟಿಪಿಟಿಕ್ ಎನ್ನಲಿಲ್ಲ. ಮಹಿಳೆಯರಿಗೆ ನೀಡಿದ ಸ್ಮಾರ್ಟ್ ಫೋನ್(Smart phone) ಭರವಸೆಯೂ ಹಾಗೆಯೇ.  

ಅಭ್ಯಾಸ ಬಲದಲ್ಲಿ ಮುಂದುವರಿದಿರುವ  ಕಾಂಗ್ರೆಸ್‌ ಕರ್ನಾಟಕದಲ್ಲೂ ಅದನ್ನೇ ಮಾಡುತ್ತಿದೆ.

ಪ್ರಚಾರಕ್ಕೆ ಬೇಕಾಗಿ ಗೃಹಲಕ್ಷ್ಮಿ(Gruha lakshmi) ಎಂಬ ಪರಿಕಲ್ಪನೆಯನ್ನು  ಪ್ರಿಯಾಂಕಾ ಗಾಂಧಿ ಹರಿಬಿಟ್ಟಿದ್ದಾರೆ. ಉದ್ಯೋಗ ಸೃಷ್ಟಿಯ‌ ಕಡೆಗೆ ರಾಜ್ಯ ದಾಪುಗಾಲಿಡುತ್ತಿರುವಾಗ  ಕಾಂಗ್ರೆಸ್‌ ನಿರುದ್ಯೋಗ ಬಯಸುತ್ತಿದೆ. 

ಅಳಿವು ಉಳಿವಿನ ಕೊನೆಯ ಹಂತಕ್ಕೆ ತಲುಪಿದಾಗ ಸುಳ್ಳು ಹೇಳುವುದು ಮತ್ತು ಹುಸಿ ಭರವಸೆ ನೀಡುವುದು ಸಹಜವಾಗಿ ಮೈಗೂಡುತ್ತದಂತೆ‌. 

ಕಾಂಗ್ರೆಸ್‌ ಪಕ್ಷದ ಪರಿಸ್ಥಿತಿ‌ ಹಾಗೆಯೇ ಆಗಿದೆ. ಚುನಾವಣೆಗೂ ಮುನ್ನ ಯೋಜನೆಗಳ ಸಾಧ್ಯಾಸಾಧ್ಯತೆ ಅರಿಯದೆ ಪ್ರಚಾರಕ್ಕಾಗಿ ಘೋಷಿಸುವುದು ಈಗ ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ: https://vijayatimes.com/priyanka-gandhi-unveiled-project/

ಮತ್ತೊಂದು ಟ್ವೀಟ್‌ನಲ್ಲಿ, ಛತ್ತೀಸ್ಗಡದಲ್ಲಿ ನಿರುದ್ಯೋಗಿ ಯುವತಿಯರಿಗೆ ₹2,500 ಮಾಸಿಕ ಭತ್ಯೆ  ನೀಡಲಿಲ್ಲ. ವಿಧವೆಯರಿಗೆ ಮಾಸಿಕ ₹1,000 ಪೆನ್ಷನ್ ನೀಡಲಿಲ್ಲ. 

ಹಿಮಾಚಲ ಪ್ರದೇಶದಲ್ಲಿ 18-60 ವರ್ಷದ ಮಹಿಳೆಯರಿಗೆ ₹1,500 ನೆರವು ನೀಡಲಿಲ್ಲ. ರಾಜಸ್ಥಾನದಲ್ಲಿ(Rajashan) ನಿರುದ್ಯೋಗಿ ಯುವತಿಯರಿಗೆ ₹3,500 ಮಾಸಿಕ ನಿರುದ್ಯೋಗ ಭತ್ಯೆ ನೀಡಲಿಲ್ಲ. 

ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿಲ್ಲ ಹೀಗೆ ಕಾಂಗ್ರೆಸ್‌ಎಲ್ಲ ಕಡೆಯೂ ಕೊಟ್ಟ ಮಾತನ್ನು ತಪ್ಪಿದೆ ಎಂದು ಬಿಜೆಪಿ ಟೀಕಿಸಿದೆ.

Tags: Congresspoliticaltweets

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.