ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ : ಬಿಜೆಪಿ ವ್ಯಂಗ್ಯ!

DKS

ಕಾಂಗ್ರೆಸ್ ಪಕ್ಷದಲ್ಲಿ(Congress Party) ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಮತ್ತು ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್(DK Shivkumar) ನಡುವಿನ ಮುಸುಕಿನ ಗುದ್ದಾಟವನ್ನೇ ವಿಷಯವಸ್ತುವಾಗಿಟ್ಟುಕೊಂಡು ರಾಜ್ಯ ಬಿಜೆಪಿ ಡಿಕೆಶಿ ಅವರನ್ನು ವ್ಯಂಗ್ಯ ಮಾಡಿದೆ.

ಸರಣಿ ಟ್ವೀಟ್‍ಗಳ ಮೂಲಕ ಬಿಜೆಪಿ ಡಿಕೆಶಿ ಕಾಲೆಳೆದಿದೆ. ಸರಣಿ ಟ್ವೀಟ್‍ಗಳ ವಿವರ ಇಲ್ಲಿದೆ ನೋಡಿ. ಎರಡನೇ ಅಭ್ಯರ್ಥಿ ಹಾಕದೆ, ತಮ್ಮ ಹೆಚ್ಚುವರಿ ಮತಗಳ ಮೂಲಕ ಜೆಡಿಎಸ್(JDS) ಅಭ್ಯರ್ಥಿಯನ್ನು ಗೆಲ್ಲಿಸಲು ಡಿಕೆಶಿ ರಣತಂತ್ರ ರೂಪಿಸಿದ್ದರು. ಇದನ್ನರಿತ ಸಿದ್ದರಾಮಯ್ಯ, ಡಿಕೆಶಿ ಆಪ್ತರನ್ನೇ ಎರಡನೇ ಅಭ್ಯರ್ಥಿಯಾಗಿಸಿದರು. ಅಸಹಾಯಕ ಡಿಕೆಶಿ ಈಗ, ಜೆಡಿಎಸ್‍ಗೆ ನೀಡಿದ ಮಾತು ಉಳಿಸಿಕೊಳ್ಳುತ್ತಾರೋ ಅಥವಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಳ್ಳುತ್ತಾರೋ?

ಗೆದ್ದಲು ಹುಳ ಇಡಿ ಮರವನ್ನೇ ಒಳಗ್ಗಿನಿಂದ ಕೊರೆದು, ಒಮ್ಮೆಲೇ ಹೆಮ್ಮರವನ್ನು ಬುಡ ಸಮೇತ ಬೀಳಿಸುತ್ತದೆ. ಈ ಕಲೆ ಸಿದ್ದರಾಮಯ್ಯ ಅವರಿಗೆ ಸಿದ್ಧಿಸಿದೆ. ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ. ಶೀಘ್ರದಲ್ಲೇ ಬಂಡೆ ಟೊಳ್ಳಾಗಿ, ಕುಸಿಯಲಿದೆ, ಅಸಹಾಯಕ ಡಿಕೆಶಿ ಮೂಕಪ್ರೇಕ್ಷಕ ಅಷ್ಟೇ..ಪರಿಷತ್ ಚುನಾವಣೆ, ರಾಜ್ಯಸಭಾ ಚುನಾವಣೆ, ಪಕ್ಷದ ಪದಾಧಿಕಾರಿಗಳ ಪಟ್ಟಿ ಇವರೆಲ್ಲರಲ್ಲೂ ಡಿಕೆಶಿ ಅವರದ್ದು ನಾಮಕಾವಸ್ಥೆಯ ಸಹಿ ಮಾತ್ರ, ಅಧಿಕಾರದ ಛಾಪು ಕಾಣುತ್ತಲೇ ಇಲ್ಲ.

ಡಿಕೆಶಿ ಅವರೇ, ನೀವು ನಿಂತ ನೆಲ ಬಿರುಕು ಬಿಡುತ್ತಿದೆ, ಪರಮೇಶ್ವರ್ ಅವರನ್ನು ನೆನಪಿಸಿಕೊಳ್ಳಿ, ಕನಕಪುರ ಜೋಕೆ. ಸಿದ್ದರಾಮಯ್ಯ ಅವರು ಚದುರಂಗ ಆಟದಲ್ಲಿ ಬಾರಿ ನಿಸ್ಸಿಮರು. ಡಿಕೆಶಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ, ರಾಜನಂತೆ ಬಿಂಬಿಸಿ ಈಗ ಅವರ ಬೆಂಬಲಿಗರನ್ನೇ ಎತ್ತಿಕಟ್ಟುತ್ತಿದ್ದಾರೆ. ಡಿಕೆಶಿ, ಅಸಹಾಯಕರಾಗಿ ನಿಲ್ಲಬೇಕಷ್ಟೇ..” ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

Exit mobile version