ಸಿದ್ದರಾಮಯ್ಯನವರೇ, ನೀವು ಚುನಾವಣೆಗೆ ನಿಲ್ಲಬಹುದು, ಆದ್ರೆ ಗೆಲ್ಲಲು ಸಾಧ್ಯವಿಲ್ಲ : ಬಿಜೆಪಿ

siddaramaiah

ಚಾಮುಂಡೇಶ್ವರಿಯಲ್ಲಿ ಸೋಲಾಯ್ತು, ಬಾದಾಮಿಯಲ್ಲಿ ಸೋಲುವ ಬೀತಿ. ಸಿದ್ದರಾಮಯ್ಯನವರೇ(Siddaramaiah), ಮುಂದೆ ನೀವು ಚುನಾವಣೆಗೆ(Election) ನಿಲ್ಲಬಹುದು ಆದರೆ ಗೆಲ್ಲಲು ಸಾಧ್ಯವಿಲ್ಲ. ನಿಮ್ಮ ಜೀವನದಲ್ಲಿ ಚುನಾವಣಾ ಪರ್ವ ಮುಗಿದ ಅದ್ಯಾಯ. ನಿಮ್ಮ ‘ಕೊನೆಯ’ ಚುನಾವಣೆಯಲ್ಲಿ ಸೋಲುವುದು ಶತಸಿದ್ಧ.ಇದು ನಮ್ಮ ಮಾತಲ್ಲ,‌ ನಿಮ್ಮದೇ ಪಕ್ಷದ ನಾಯಕರ ಅಭಿಲಾಷೆ ಎಂದು ಬಿಜೆಪಿ(BJP) ಲೇವಡಿ ಮಾಡಿದೆ.


ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ರಾಜ್ಯ ಬಿಜೆಪಿ(State BJP), ಸಿದ್ದರಾಮಯ್ಯನವರ ಬಗಲಲ್ಲೇ ಶತ್ರುಗಳಿದ್ದಾರೆ. ಪರಮೇಶ್ವರ, ಡಿಕೆಶಿ, ಮುನಿಯಪ್ಪ, ಖರ್ಗೆ, ದೇಶಪಾಂಡೆ, ಶ್ಯಾಮನೂರು ಶಿವಶಂಕರಪ್ಪ ಪಟ್ಟಿ ದೊಡ್ಡದಿದೆ. ನಿಮ್ಮ ಸೋಲಿಗೆ ಸುಪಾರಿ ಕೊಡುವವರನ್ನು ಅನ್ಯ ಪಕ್ಷದಲ್ಲಿ ಹುಡುಕುವ ಅಗತ್ಯವಿಲ್ಲ. ಕೋಲು ನೀವು ಹಿಡಿಯಬೇಕಾಗಿಲ್ಲ, ಜನರೇ ಹಿಡಿಸುತ್ತಾರೆ. ಅದಕ್ಕಾಗಿ 2023 ರವರೆಗೆ ಕಾಯಬೇಡಿ. ಈಗಲೇ ಕೋಲು ಹುಡುಕಿಕೊಳ್ಳಿ. ನಿಮ್ಮದೇ ಪಕ್ಷದ ನಾಯಕರು ಹಾಗೂ ಮತದಾರರು ನಿಮ್ಮ ಕೈ ಹಿಡಿಯುವುದಿಲ್ಲ. ಅಂತಿಮವಾಗಿ ನಿಮ್ಮ ಬಳಿ ಉಳಿಯುವುದು ಕೋಲಷ್ಟೇ ಎಂದು ವ್ಯಂಗ್ಯವಾಡಿದೆ.

ಸಿದ್ದರಾಮಯ್ಯನವರೇ, ಈ ಬಾರಿ ನೀವು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ. ಹೀಗಾಗಿ ಇದೇ ನಿಮ್ಮ ಕೊನೆಯ ಚುನಾವಣೆ ಎಂಬುದರಲ್ಲಿ ಎರಡು ಮಾತಿಲ್ಲ. ಅಂದ ಹಾಗೆ ನಿಮ್ಮ ಸೋಲಿಗೆ ಯೋಗದಾನ ನೀಡುವವರು ನಿಮ್ಮ ಪಕ್ಷದಲ್ಲೇ ಇದ್ದಾರೆ ಎಂಬುದನ್ನು ಮರೆಯಬೇಡಿ. ಪ್ರತಿ ಬಾರಿ ಚುನಾವಣೆ ಬಂದಾಗಲೂ ಸಿದ್ದರಾಮಯ್ಯ ಅವರದ್ದು ಅದೇ ರಾಗ, ಅದೇ ಹಾಡು. ಇದೇ ನನ್ನ ಕೊನೆಯ ಚುನಾವಣೆ ಎನ್ನುವುದು ಅಭ್ಯಾಸವಾಗಿ ಬಿಟ್ಟಿದೆ. ಹೀಗೇ ಹೇಳುತ್ತಿರಿ, ಜನರೇ ನಿಮ್ಮ ರಾಜಕೀಯಕ್ಕೆ ಅಂತ್ಯ ಹಾಡುತ್ತಾರೆ.

ಬಾದಾಮಿಯಲ್ಲಿ ಕೂದಲೆಳೆಯ ಅಂತರದಲ್ಲಿ ಜೀವದಾನ ಪಡೆದಿರಿ. ಮುಂದೆ ನಿಮ್ಮವರೂ ನಿಮ್ಮನ್ನು ಕಾಪಾಡಲಾರರು ಎಂದು ಕಾಲೆಳೆದಿದೆ.

Exit mobile version