ನಾನು ಡಿನೋಟಿಫಿಕೇಷನ್‌ ಮಾಡಿದ್ದೇನೆ ಎಂಬ ಬಿಜೆಪಿ  ಆರೋಪ ಸಂಪೂರ್ಣ ಸುಳ್ಳು : ಸಿದ್ದರಾಮಯ್ಯ

bjp

Karnataka: 1954 ರಲ್ಲಿ ಡಿನೋಟಿಫಿಕೇಷನ್ ಮಾಡಿದ್ದ ಈ ಜಮೀನುಗಳನ್ನು 2007 ರಲ್ಲಿ (bjp targets siddaramaiah)ನಗರದ ಮಾಸ್ಟರ್ ಪ್ಲಾನ್ ಮಾಡುವಾಗ ಭೂ ಸ್ವಾಧೀನ ಮಾಡಿಕೊಂಡು ಭೂಮಾಲೀಕರಿಗೆ ಪರಿಹಾರ ಕೊಡದೆ ಪಾರ್ಕ್‍ಗೆ ಎಂದು ಗುರುತಿಸಲಾಗಿದೆ.

2007ರಲ್ಲಿ ಯಾವ ಪಕ್ಷದ ಸರ್ಕಾರ ಇತ್ತು. ನನ್ನ ವಿರುದ್ಧದ ಆರೋಪದಲ್ಲಿ ಉಲ್ಲೇಖಿಸಿರುವ ಜಮೀನುಗಳನ್ನು ಭೂ ಸ್ವಾಧೀನ(bjp targets siddaramaiah)ಪಡಿಸಿಕೊಂಡಿದ್ದು, 1948 ರಲ್ಲಿ.

ಆ ಜಮೀನುಗಳನ್ನು ಭೂಸ್ವಾಧೀನದಿಂದ ಕೈ ಬಿಟ್ಟು ‘ದಿ ಮೈಸೂರು ಗೆಜೆಟ್’ ನಲ್ಲಿ ಪ್ರಕಟವಾಗಿದ್ದು 11/2/1954 ಮತ್ತು 28/12/1954 ರಲ್ಲಿ. 

ಇದನ್ನೂ ಓದಿ : https://vijayatimes.com/bjp-slams-mamata-statement/

ಇದರಲ್ಲಿ ನಮ್ಮ ಸರ್ಕಾರದ ಪಾತ್ರ ಏನಿದೆ? ಲಾಲ್‌ಬಾಗ್ ಸಿದ್ಧಾಪುರ ಗ್ರಾಮದ ಸರ್ವೆನಂ 27/1, 28/4, 5,6 ರಲ್ಲಿನ 2 ಎಕರೆ 39.5 ಗುಂಟೆ ಜಮೀನನ್ನು ನಾನು  ಡಿನೋಟಿಫಿಕೇಷನ್/ರೀಡೂ ಮಾಡಿದ್ದೇನೆ,

ಎಂಬ  ಬಿಜೆಪಿ (BJP)  ಅವರ ಆರೋಪ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ ಎಂದು  ಸಿದ್ದರಾಮಯ್ಯನವರು (Siddaramaiah) ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಡಿನೋಟಿಫಿಕೇಷನ್  ಮಾಡಿದ್ದಾರೆ  ಎಂದು ಆರೋಪಿಸಿರುವ ಬಿಜೆಪಿ ವಿರುದ್ದ ವಾಗ್ದಾಳಿ  ನಡೆಸಿರುವ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ 3 ತಿಂಗಳಾಯಿತು.

ಆದರೆ ಇದುವರೆಗೂ ಕೂಡ ಸಿ.ಡಿ.ಪಿ ಗೆ(CDP) ಅನುಮೋದನೆ ನೀಡಿಲ್ಲ. ಸಿ.ಡಿ.ಪಿ ಯನ್ನು ಅಂತಿಮಗೊಳಿಸದ ಕಾರಣ ನಗರದ ಬೆಳವಣಿಗೆ ಅಡ್ಡಾದಿಡ್ಡಿಯಾಗಿದೆ.

ಆದ್ದರಿಂದ ಕೂಡಲೆ ಸಿ.ಡಿ.ಪಿ ಯನ್ನು ಅಂತಿಮಗೊಳಿಸಿ ಗೆಜೆಟ್ ಹೊರಡಿಸಬೇಕು ಎಂದು ಒತ್ತಾಯಿಸುತ್ತೇನೆ.

ಸರ್ಕಾರ ಭೂಬಳಕೆ ಬದಲಾವಣೆಯನ್ನು ಹಿಂಪಡೆದ ಕಾರಣಕ್ಕೆ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್(High Court) ಭೂಬಳಕೆ ಬದಲಾವಣೆಯ ತೀರ್ಮಾನವನ್ನು ರದ್ದು ಮಾಡಿತ್ತು.

ಇದಕ್ಕೆ ಸಂಬಂಧಿಸಿದ ರಿಟ್ ಮೇಲ್ಮನವಿಯನ್ನೂ ವಜಾ ಮಾಡಿತ್ತು. ಈಗ ಪ್ರಕರಣ ಸುಪ್ರೀಂಕೋರ್ಟ್(Supreme Court) ನಲ್ಲಿದೆ.

ಇದರಲ್ಲಿ ನನ್ನ ಪಾತ್ರ ಏನಿದೆ?  ನಮ್ಮ ಸರ್ಕಾರವು ಈ ಜಮೀನುಗಳಿಗೆ ನೀಡಿರುವ ಭೂ ಉಪಯೋಗವನ್ನು ಬದಲಾಯಿಸಿ ಕೊಟ್ಟಿದ್ದರ ಬಗ್ಗೆ ಕೆಲವರು ಅಪಸ್ವರ ಎತ್ತಿದ ಕಾರಣಕ್ಕೆ ಮತ್ತೊಮ್ಮೆ ಮರುಪರಿಶೀಲಿಸಿ ದಿನಾಂಕ 13/3/2015 ರಂದು ವಸತಿ ಉದ್ದೇಶಕ್ಕೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲಾಗಿತ್ತು.

https://youtu.be/2gBpiqMiKks ರಸ್ತೆ ಕಾಣದ ಕ್ಷೇತ್ರ! ದಶಕಗಳಿಂದ ಅಭಿವೃದ್ಧಿ ಕಾಣದ ಯಶವಂತಪುರ ಕ್ಷೇತ್ರ.

ಸದರಿ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಂಡು ಪಾರ್ಕ್ ಮಾಡದೆ ವಸತಿ ಉದ್ದೇಶಕ್ಕಾಗಿ ಪರಿವರ್ತನೆ ಮಾಡಬಹುದೆಂದು 18/01/2013 ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಆಗ ಯಾವ ಪಕ್ಷದ ಸರ್ಕಾರ ಇತ್ತು  ಎಂದು ಪ್ರಶ್ನಿಸಿದ್ದಾರೆ.

ಭೂ ಹಗರಣಗಳನ್ನು (Land scam) ಬಯಲಿಗೆಳೆಯುವ ಪ್ರಾಮಾಣಿಕವಾದ ಉದ್ದೇಶವನ್ನು ರಾಜ್ಯ ಬಿಜೆಪಿ(State BJP)  ಸರ್ಕಾರ ಹೊಂದಿದ್ದರೆ 2008 ರಿಂದ ಇದುವರೆಗೆ ಬೆಂಗಳೂರು, ಮತ್ತು ರಾಜ್ಯದ ಬೇರೆ ನಗರಗಳಲ್ಲಿನ ಜಮೀನು ಉಪಯೋಗ ಬದಲಾವಣೆಯ ಪ್ರತಿ ಪ್ರಕರಣದ ಮಾಹಿತಿಯನ್ನೂ ಬಿಡುಗಡೆ ಮಾಡಬೇಕು.

ಲಾಲ್‌ಬಾಗ್ ಸಿದ್ಧಾಪುರದ ಜಮೀನುಗಳ ಕುರಿತ ಸುಳ್ಳಿನ ಕಂತೆಗಳ ಮೂಲಕ ನನ್ನ ಚಾರಿತ್ರ್ಯಹನನ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಯ ಮರಿನಾಯಕನ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಬಿಜೆಪಿ  ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದಿದ್ದಾರೆ.

Exit mobile version