ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? : ಬಿಜೆಪಿ

BJP

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್(Veera Savarkar) ಫೋಟೋ(Photo) ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ(Siddaramaiah) ಯಾರು? ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವೇ ಅಥವಾ ನಿಮ್ಮ ನಾಯಕತ್ವದಲ್ಲಿ ಅವರಿಗೆ ಸ್ವಾಯತ್ತತೆ ನೀಡಲಾಗಿದೆಯೋ?

ಸಿದ್ದರಾಮಯ್ಯ ಬೀದಿಗೆ ಬಿಟ್ಟ ರಕ್ತಬೀಜಾಸುರರೇ ಶಿವಮೊಗ್ಗದಲ್ಲಿ ಗಲಾಟೆ ಸೃಷ್ಟಿಸಿದ್ದು ಎಂಬ ಗುಮಾನಿ ಈಗ ಸತ್ಯವಾಗಿದೆ. ಜಿಹಾದಿ ಮಾನಸಿಕತೆಯ ಉಗ್ರರ ಪರವಾಗಿ ಸಿದ್ದರಾಮಯ್ಯ ವಕಾಲತ್ತು ವಹಿಸುವುದರಲ್ಲಿ ಅಚ್ಚರಿಯಿಲ್ಲ ಎಂದು ಬಿಜೆಪಿ(BJP) ಟೀಕಿಸಿದೆ. ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ಟಿಪ್ಪುವಿನ ಫೋಟೋ ಎಲ್ಲಿ ಬೇಕಾದರೂ ಹಾಕಬಹುದು. ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ.

ಓಲೈಕೆ ರಾಜಕಾರಣದ ಪರಮಾವಧಿಯಿದು. ಜಿಹಾದಿ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಬೆಳೆಸುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ. ಸಿದ್ದರಾಮಯ್ಯ ಅವರು ಸ್ವತಂತ್ರ ಭಾರತದ ಜಿನ್ಹಾ. ಮುಸ್ಲಿಂ ಏರಿಯಾಗಳನ್ನು ಈ ದೇಶದ ಅಖಂಡತೆಯಿಂದ ಛಿದ್ರಗೊಳಿಸುವುದಕ್ಕೆ ಹೊರಟಿದ್ದೀರಾ? ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ(Congress Party) ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ ಎಂದಿದೆ.

ಇನ್ನು ಶಿವಮೊಗ್ಗದಲ್ಲಿ(Shivamogga) ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ನಡೆದ ಚಾಕು ಇರಿತ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.

ಅದೇ ರೀತಿ ಶಿವಮೊಗ್ಗದಲ್ಲಿ ನಡೆದ ಘರ್ಷಣೆ ಖಂಡನೀಯ. ಘಟನೆ ವೇಳೆ ಕಿಡಿಗೇಡಿಗಳು ರಾಷ್ಟ್ರಧ್ವಜಕ್ಕೆ(National Flag) ಅವಮಾನ ಮಾಡಿದ್ದಾರೆ. ತಪ್ಪಿಸ್ಥರು ಯಾರೇ ಆದರೂ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ(BJP State President) ನಳಿನ್‌ ಕುಮಾರ್‌ ಕಟೀಲ್‌(Nalin Kumar Kateel) ಹೇಳಿದ್ದಾರೆ.

Exit mobile version