ಬೆಂಗಳೂರು ನ 9 : ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಉಪಚುನಾವಣೆ ಸೋಲು ಹಾಗೂ ಗೆಲುವಿನ ಬಗ್ಗೆ ಚರ್ಚೆ ನಡೆಯಲಿದೆ.
ಬಿಜೆಪಿ ಭದ್ರಕೋಟೆಯಾಗಿದ್ದ ಹಾನಗಲ್ ಕ್ಷೇತ್ರ ಕಳೆದುಕೊಳ್ಳಲು ಕಾರಣದ ಬಗ್ಗೆ ಚರ್ಚೆ ನಡೆಯಲಿದ್ದು, ಅರುಣ್ ಸಿಂಗ್ 2023ಕ್ಕೆ ಕ್ಷೇತ್ರ ಮರಳಿ ಪಡೆಯಲು ಯೋಜನೆ ರೂಪಿಸಲು ಸೂಚನೆ ನೀಡಲಿದ್ದಾರೆ. ಅಲ್ಲದೇ ವಿಧಾನಪರಿಷತ್ ಸದಸ್ಯರ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದ್ದು, ಅಭ್ಯರ್ಥಿಗಳ ಪಟ್ಟಿ ಇಂದು ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಲಿದೆ. ಇನ್ನು ನವೆಂಬರ್ 19ರಿಂದ ಬಿಜೆಪಿ ಹಿರಿಯ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದು, ತಂಡದ ತಯಾರಿ ಬಗ್ಗೆಯೂ ಇಂದು ಚರ್ಚೆಯಾಗಲಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.