ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ

ಬೆಂಗಳೂರು ಅ 1 : ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರು ಜೆಡಿಎಸ್‍ಗೆ ಗುಡ್ ಬೈ ಹೇಳುತ್ತಿದ್ದು. ಅಲ್ಲದೆ ಬಿಜೆಪಿ ಸೇರುವುದಾಗಿ ಸಹ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಜೆಡಿಎಸ್‍ನಿಂದ ದೂರ ಉಳಿದಿರುವ ಬೆನ್ನಲ್ಲೇ ಇದೀಗ ಜಿಡಿಎಸ್‍ಗೆ ಮತ್ತೊಂದು ಆಘಾತವಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮುನಿಸಿಕೊಂಡಿರುವ ಸಂದೇಶ್ ನಾಗರಾಜ್, ಸದ್ಯ ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಜೆಡಿಎಸ್ ನಿಂದ ಗೆದ್ದು ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ಸದಸ್ಯತ್ವದ ಅವಧಿ ಇದೇ ಡಿಸೆಂಬರ್ ಗೆ ಅಂತ್ಯವಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಂದೇಶ್ ನಾಗರಾಜ್ ಒಲವು ತೋರಿದ್ದಾರೆ.

ಸದ್ಯ ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಜೆಡಿಎಸ್ ನಿಂದ ಗೆದ್ದು ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ಸದಸ್ಯತ್ವದ ಅವಧಿ ಇದೇ ಡಿಸೆಂಬರ್ ಗೆ ಅಂತ್ಯವಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಂದೇಶ್ ನಾಗರಾಜ್ ಒಲವು ತೋರಿದ್ದಾರೆ.

ಈ ಎಲ್ಲಾ ಅಂಶಗಳಿಗೆ ಪುಷ್ಠಿ ನೀಡುವಂತೆ ಇಂದು ಬಿಜೆಪಿ ಕಚೇರಿಗೆ ಆಗಮಿಸಿದ ಜೆಡಿಎಸ್ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾರನ್ನು ಸಹ ಭೇಟಿ ಮಾಡಿ ಚರ್ಚಿಸಿದ್ದು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.

Exit mobile version