• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ
0
SHARES
0
VIEWS
Share on FacebookShare on Twitter

ಮುಂಬೈ, ಜು. 07: ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ಅವರು ಬುಧವಾರ ಬೆಳಗ್ಗೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು.

ಕಳೆದ ಹಲವು‌ ದಿನಗಳಿಂದ ಉಸಿರಾಟದ ಸಮಸ್ಯೆ ಸೇರಿದಂತೆ ವಯೋಸಹಜ‌ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.‌ ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಬೆಳಗ್ಗೆ 7:30ರ ವೇಳೆಗೆ ಕೊನೆಯುಸಿರೆಳೆದರು. ದಿಲೀಪ್ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

1922 ಡಿಸೆಂಬರ್ 11ರಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. 1944ರಲ್ಲಿ ಜ್ವರ್ ಭಾತಾ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ದಿಲೀಪ್ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ.

ಬಾಲಿವುಡ್ ನಲ್ಲಿ ದಶಕಗಳ ಕಾಲ ಮಿಂಚಿದ ದಿಲೀಪ್ ಕುಮಾರ್, ದಾದಾಸಾಹೇಬ ಫಾಲ್ಕೆ, ಪದ್ಮಭೂಷಣ, ನಿಷಾನ್‌-ಎ-ಇಮ್ತಿಯಾಜ್‌ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಪುರಸ್ಕೃತರಾಗಿದ್ದರು. ಹಿರಿಯ ನಟನ ನಿಧನಕ್ಕೆ ಭಾರತೀಯ ಚಿತ್ರರಂಗದ ಗಣ್ಯರು ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.