Karachi: ಪಾಕಿಸ್ತಾನದ (Bomb Blast in Baluchistan) ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಯಾನಕ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದು, ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆ ಮಸೀದಿಯೊಂದರ
ಬಳಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್ (Bomb) ಸ್ಫೋಟದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ. 130ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.
ಸ್ಫೋಟದಲ್ಲಿ ಬಲಿಯಾದವರ ಪೈಕಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕೂಡ ಸೇರಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಗಾಯಗೊಂಡವರಲ್ಲಿ ಅನೇಕರ ಸ್ಥಿತಿ
ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ಬಲೂಚಿಸ್ತಾನದ (Baluchistan) ಮಸ್ತುಂಗ್ ಜಿಲ್ಲೆಯ ಮಸೀದಿಯೊಂದರ ಸಮೀಪ ಬಾಂಬ್ ಸ್ಫೋಟ ಸಂಭವಿಸಿದೆ.
ಅಲ್ಫಾಹ್ ರಸ್ತೆಯ ಮದೀನಾ ಮಸೀದಿ ಸಮೀಪ ಈದ್ ಇ ಮಿಲಾದ್ (Eid-E-Milad) ನಬಿ ಮೆರವಣಿಗೆಗಾಗಿ ನೂರಾರು ಜನರು ಸೇರಿದ್ದು, ಇದು ಆತ್ಮಾಹುತಿ ದಾಳಿ ಎಂದು ಎಸ್ಎಚ್ಒ ಲೆಹ್ರಿ
(SHO Lehri) ತಿಳಿಸಿದ್ದಾರೆ.
ಮಸ್ತುಂಗ್ ಸಹಾಯಕ ಕಮಿಷನರ್ ಅಟ್ಟಾ ಉಲ್ ಮುನಿಮ್ (Atta-Ul-Munim) ಅವರು ಈ ಸ್ಫೋಟ ಬೃಹತ್ ಪ್ರಮಾಣದ್ದಾಗಿದೆ ಎಂದು ತಿಳಿಸಿದ್ದು, ಜಿಲ್ಲಾ ಆಡಳಿತದ ಮಾಹಿತಿ ಪ್ರಕಾರ ಮೃತರಲ್ಲಿ
ಮಸ್ತುಂಗ್ ಡಿಎಸ್ಪಿ ನವಾಜ್ ಗಶ್ಕೋರಿ (DSP Nawaz Gashkori) ಸೇರಿದ್ದಾರೆ. ಇದು ಆತ್ಮಾಹುತಿ ದಾಳಿ ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾಗಿ ಡಾನ್ ಪತ್ರಿಕೆಯು ತಿಳಿಸಿದೆ.
ಮಸೀದಿಯ ಸುತ್ತಮುತ್ತಲೂ ಹತ್ತಾರು (Bomb Blast in Baluchistan) ಶವಗಳು ಛಿದ್ರಗೊಂಡು ಬಿದ್ದಿರುವುದು ಸ್ಫೋಟದ ಬಳಿಕದ ವಿಡಿಯೋ ಹಾಗೂ ಚಿತ್ರಗಳಲ್ಲಿ ಕಾಣಿಸಿದೆ.
ದೇಹಗಳಿಂದ ಬೇರ್ಪಟ್ಟ ಕೈ ಕಾಲುಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಘಟನೆಯ ಭೀಕರ ಸ್ವರೂಪಕ್ಕೆ ಸಾಕ್ಷಿಯಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಮತ್ತು ಕೆಲವು ಗಾಯಗೊಂಡಿರುವವರ
ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಒಂದೇ ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಸ್ಫೋಟ ಇದಾಗಿದ್ದು, ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜಮಿಯತ್ ಉಲೆಮಾ- ಇ- ಇಸ್ಲಾಮ್ ಫಾಜಿ (ಜೆಯುಐ- ಎಫ್)
ನಾಯಕ ಹಫೀಜ್ ಹಮ್ದುಲ್ಲಾ (Hafeez Hamdulla) ಸೇರಿದಂತೆ ಅನೇಕರು ಗಾಯಗೊಂಡಿದ್ದರು.
ಪಿಟಿಐ (PTI) ನಾಯಕ ಇಮ್ರಾನ್ ಇಸ್ಮಾಯಿಲ್ (Imran Ismail) ಸ್ಫೋಟವನ್ನು ತೀವ್ರವಾಗಿ ಖಂಡಿಸಿದ್ದು, ಅಮಾಯಕರ ಬದುಕನ್ನು ಕೊನೆಗಾಣಿಸುವವರು ದಬ್ಬಾಳಿಕೆಗಾರರು ಮತ್ತು ಭಯೋತ್ಪಾದಕರು
ಎಂದು ಕರೆದಿದ್ದಾರೆ.
ಮಸ್ತಂಗ್ನ ಮದೀನಾ ಮಸೀದಿ ಬಳಿ ನಡೆದ ಸ್ಫೋಟವನ್ನು ಆಂತರಿಕ ಸಚಿವ ಸರ್ಫರಾಜ್ ಅಹ್ಮದ್ ಬುಗ್ತಿ ಬಲವಾಗಿ ಖಂಡಿಸಿದ್ದಾರೆ. ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ತೀವ್ರ ದುಃಖ ಮತ್ತು
ವಿಷಾದ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ಬಂದ್ ಮಾಡುವುದರಿಂದ ಉಪಯೋಗವಿಲ್ಲ, ರಾಜ್ಯದ ಹಿತ ಕಾಪಾಡಬೇಕು ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಮನವಿ
- ಭವ್ಯಶ್ರೀ ಆರ್.ಜೆ