ಪುನೀತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕುಟುಂಬಸ್ಥರಿಗೆ ಮತ್ತು ಗಣ್ಯರಿಗೆ ಮಾತ್ರ ಅವಕಾಶ

ಬೆಂಗಳೂರು ಅ 31 : ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರ ಮೆರವಣಿಗೆ ಮೂಲಕ ಕೆಲವೇ ಕ್ಷಣಗಳ ಹಿಂದೆ ಕಂಠೀರವ ಸ್ಟುಡಿಯೋ ತಲುಪಿದೆ. ಪುನೀತ್ ರಾಜ್ ಕುಮಾರ್ ಅವರ ಕುಟುಂಬದವರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಕೆಲವು ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಿಂದ ಪಾರ್ಥಿವ ಶರೀರದ ಮೆರವಣಿಗೆ ಬೆಳಗ್ಗೆ 5ರಿಂದ ವೇಳೆಗೆ ಆರಂಭವಾಗಿತ್ತು.. ಆ ವೇಳೆಗೆ ಸಾಕಷ್ಟು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಮಾರ್ಗದುದ್ದಕ್ಕೂ ಸಾವಿರಾರರು ಅಭಿಮಾನಿಗಳು ಕೈ ಮುಗಿದು ನಿಂತಿದ್ದ ದೃಶ್ಯಗಳು ಕಂಡು ಬಂದಿದ್ದವು.

Exit mobile version