ಸಿದ್ದರಾಮಯ್ಯನವರು, ಶಾಮನೂರು ಶಿವಶಂಕರಪ್ಪ ಮಾಡಿರುವ ಪ್ರಶ್ನೆಗಳಿಗೆ ಉತ್ತರಿಸಲಿ: ಬಸವರಾಜ ಬೊಮ್ಮಾಯಿ

Hubballi: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು (Bommai question raised – Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಕಿಡಿಕಾರಿದ್ದು,

ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಪ್ರಶ್ನೆಗೆ ಲಿಂಗಾಯಿತ ಅಧಿಕಾರಿಗಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಉತ್ತರಿಸಬೇಕು. ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ

ಲಕ್ಷಣ ಅಲ್ಲ. ರೈತರ ಪಾಲಿಗೆ ಈ ಸರ್ಕಾರ ಜೀವಂತವಾಗಿಲ್ಲ (Bommai question raised – Siddaramaiah) ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾಂಗ್ರೆಸ್‌ (Congress) ಪಕ್ಷ ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬರುತ್ತಿದ್ದು, ವರ್ಗಾವಣೆ ವಿಷಯದಲ್ಲಿ ಬಹಳಷ್ಟು ಅಸಮಾಧಾನಕ್ಕೆ ಈಡಾಗಿದೆ. ಎಲ್ಲಾ ಸಮಾಜಕ್ಕೂ ನ್ಯಾಯ ಕೊಡುತ್ತೇವೆ

ಅಂತ ಹೇಳಿದ್ದರು. ಆದರೆ ಅದು ಆಗಿಲ್ಲ‌. ಈಗ ಬೇರೆ ಬೇರೆ ರೂಪದಲ್ಲಿ ಹೊರಗೆ ಬರುತ್ತಿದೆ. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರು (Shamanuru Shivashankarappa) ಎತ್ತಿರುವಂತಹ

ಪ್ರಶ್ನೆಗಳಿಗೆ ಸಿಎಂ ಉತ್ತರ ಕೊಡಬೇಕು. ಉತ್ತರ ನೀಡುವವರೆಗೂ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ. ಮುಖ್ಯಮಂತ್ರಿಗಳು ಇದನ್ನು ಎಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತಾರೆ ಅಷ್ಟು ಕೆಟ್ಟ ಹೆಸರು ಬರುತ್ತದೆ ಎಂದು ಹುಬ್ಬಳ್ಳಿಯಲ್ಲಿ

ಮಾತನಾಡಿದ ಅವರು ಹೇಳಿದರು. 2014-15ರಲ್ಲಿ ಶೈಕ್ಷಣಿಕ ಮತ್ತು ಆರ್ಥಿಕತೆಯ ಗಣತಿಗೆ ಆಜ್ಞೆ ಮಾಡಿದ್ದೇವು. ಎಲ್ಲೂ ಕೂಡ ಜಾತಿ ಗಣತಿ ಮಾಡಲು ಹೇಳಿರಲಿಲ್ಲ‌. ಎಲ್ಲರಿಗೂ ಕೂಡ ಗೊತ್ತಿದೆ ಇದು

ಜಾತಿಗಣತಿಯಲ್ಲ, ರಾಜ್ಯ ಸರ್ಕಾರವು ಜಾತಿ ಗಣತಿ ಬಿಡುಗಡೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಈ ರೀತಿ ಹೇಳಿದರು.

ಪೊಲೀಸರು ಒಂದು ವರ್ಗವನ್ನು ಮುಟ್ಟಬಾರದು ಅಂತ ಪರೋಕ್ಷವಾಗಿ ಸಂದೇಶ ಬೇಕಾದಷ್ಟಿದೆ. ಸಮಾಜಘಾತಕ ಶಕ್ತಿಗಳಿಗೆ ಕಾನೂನು, ಪೊಲೀಸ್‌, ಸರ್ಕಾರದ ಭಯ ಇಲ್ಲ. ಕೋಲಾರದಲ್ಲಿ (Kolar) ಘಟನೆ

ನಡೆದಿತ್ತು. ಹೀಗಾಗಿ ಶಿವಮೊಗ್ಗದಲ್ಲಿ ಪೂರ್ವ ಬಂದೋಬಸ್ತ್ ಮಾಡಬೇಕಿತ್ತು. ಈದ್ ಮಿಲಾದ್ (Eid – Milad) ಮೆರವಣಿಗೆಯಲ್ಲಿ ಬಂದೋಬಸ್ತ್ ಯಾಕೆ ಮಾಡಲಿಲ್ಲ. ಸರ್ಕಾರ ಬಂದ ನಂತರ ಸಮಾಜಘಾತಕ

ಶಕ್ತಿಗಳಿಗೆ ಪ್ರಚೋದನೆ ಸಿಗುತ್ತಿದೆ ಮತ್ತು ಈ ಸರ್ಕಾರ ಬಂದಾಗೆಲ್ಲ ಆಡಳಿತವನ್ನು ಸುಸೂತ್ರವಾಗಿ ನಡೆಸಲು ಆಗುವುದಿಲ್ಲ ಎಂದು ಹೇಳಿದರು.

ಇದನ್ನು ಓದಿ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Exit mobile version